ರಾಹುಲ್ ಗಾಂಧಿ 
ದೇಶ

Union budget 2026: ಭಾರತದ ನೈಜ ಬಿಕ್ಕಟ್ಟುಗಳನ್ನು ಬಜೆಟ್ ಮೂಲೆಗುಂಪು ಮಾಡಿದೆ- ರಾಹುಲ್ ಗಾಂಧಿ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಮೂರನೇ ಅಧಿಕಾರಾವಧಿಯಲ್ಲಿ ಮಂಡಿಸಿದ ಮೂರನೇ ಬಜೆಟ್ ಇದಾಗಿದೆ.

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 2026-27ರ ಕೇಂದ್ರ ಬಜೆಟ್ ಅನ್ನು ಟೀಕಿಸಿದ್ದು, ಇದು ಭಾರತದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ ಎಂದು ಹೇಳಿದರು.

'ಯುವಕರಿಗೆ ಉದ್ಯೋಗವಿಲ್ಲದಂತಾಗಿದೆ, ಉತ್ಪಾದನೆ ಕುಸಿಯುತ್ತಿದೆ, ಹೂಡಿಕೆದಾರರು ಬಂಡವಾಳವನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ, ಮನೆಯ ಉಳಿತಾಯ ಕುಸಿಯುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಜಾಗತಿಕ ಆಘಾತಗಳು ಸನ್ನಿಹಿತವಾಗುತ್ತಿವೆ. ಆದರೆ ಎಲ್ಲವನ್ನೂ ನಿರ್ಲಕ್ಷಿಸಲಾಗಿದೆ' ಎಂದು ಕಾಂಗ್ರೆಸ್ ನಾಯಕ ಹೇಳಿದರು.

'ಭಾರತದ ನೈಜ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಅಗತ್ಯ ಬದಲಾವಣೆಗಳನ್ನು ಮಾಡುವಲ್ಲಿ ಬಜೆಟ್ ವಿಫಲವಾಗಿದೆ' ಎಂದು ಗಾಂಧಿಯವರು X ನಲ್ಲಿ ಪೋಸ್ಟ್‌ನಲ್ಲಿ ಹೇಳಿದರು.

2027ನೇ ಹಣಕಾಸು ವರ್ಷದಲ್ಲಿ ಸರ್ಕಾರ ತನ್ನ ಬಂಡವಾಳ ವೆಚ್ಚವನ್ನು (ಕಾಪೆಕ್ಸ್) ₹12.2 ಲಕ್ಷ ಕೋಟಿಗೆ ಹೆಚ್ಚಿಸಲು ಯೋಜಿಸಿದೆ. ಇದು ಸದ್ಯದ ವರ್ಷಕ್ಕೆ ನಿಗದಿಪಡಿಸಲಾದ ₹11.2 ಲಕ್ಷ ಕೋಟಿಗಿಂತ ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಲು, ಅದರಲ್ಲೂ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಹಲವಾರು ಕ್ರಮಗಳನ್ನು ಘೋಷಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಮೂರನೇ ಅಧಿಕಾರಾವಧಿಯಲ್ಲಿ ಮಂಡಿಸಿದ ಮೂರನೇ ಬಜೆಟ್ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

ಡಿಪ್ರೆಷನ್, ಮಧ್ಯಪಾನ, ಆತ್ಮ*ತ್ಯೆ, ಮಗಳ ಕೊಟ್ಟು ಮದುವೆ ಮಾಡಲು ಸಿದ್ಧರಿರಲಿಲ್ಲ: ಭಾರತ ತಂಡದ ಮಾಜಿ ಕ್ರಿಕೆಟಿಗ ಆಳಲು

ಆಟೋ ಚಾಲನೆ ವೇಳೆ Reels ನೋಡುತ್ತಿದ್ದ ಚಾಲಕ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ! Video ಮಾಡಿದ ಮಹಿಳೆ

SCROLL FOR NEXT