ಏರ್ ಇಂಡಿಯಾ ವಿಮಾನ 
ದೇಶ

ಅಹಮದಾಬಾದ್ ದುರಂತದಿಂದ ಎಚ್ಚೆತ್ತ Air India: ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ; ಲಂಡನ್‌-ಬೆಂಗಳೂರು ವಿಮಾನ ಹಾರಾಟ ಸ್ಥಗಿತ!

ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

ನವದೆಹಲಿ: ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಇಂದು ಹೀಥ್ರೋದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ AI 132ರಲ್ಲಿ ಎಂಜಿನ್ ಸ್ಟಾರ್ಟ್ ಆಗುವ ಸಮಯದಲ್ಲಿ, ಎಡ ಎಂಜಿನ್‌ನಲ್ಲಿನ ಇಂಧನ ನಿಯಂತ್ರಣ ಸ್ವಿಚ್ ನಿಷ್ಕ್ರಿಯವಾಗಿದ್ದು, CUTOFF ಸ್ಥಾನಕ್ಕೆ ಮರಳಿತು ಎಂದು ತಿಳಿಸಿದೆ. ಪ್ರಯಾಣಿಕರ ಸುರಕ್ಷತೆಗಾಗಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಯಿತು ಎಂದು ಏರ್ ಇಂಡಿಯಾ ಹೇಳಿದೆ.

ಬೋಯಿಂಗ್ 787-8 ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ ನಿಷ್ಕ್ರಿಯವಾಗಿದೆ ಎಂದು ನಮ್ಮ ಪೈಲಟ್‌ಗಳಲ್ಲಿ ಒಬ್ಬರು ವರದಿ ಮಾಡಿದ್ದಾರೆ. ಈ ವಿಷಯವನ್ನು ವಾಯುಯಾನ ನಿಯಂತ್ರಕ DGCA ಗೆ ಸಹ ವರದಿ ಮಾಡಲಾಗಿದೆ. DGCA ನಿರ್ದೇಶನದ ನಂತರ, ಏರ್ ಇಂಡಿಯಾ ತನ್ನ ಫ್ಲೀಟ್‌ನಲ್ಲಿರುವ ಎಲ್ಲಾ ಬೋಯಿಂಗ್ 787 ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್‌ಗಳನ್ನು ಪರಿಶೀಲಿಸಿತು. ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಏರ್ ಇಂಡಿಯಾದಲ್ಲಿ ಪ್ರಮುಖ ಆದ್ಯತೆಯಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ಇಂಧನ ಸ್ವಿಚ್ ನಿಷ್ಕ್ರಿಯದಿಂದಾಗಿ ಸಂಭವಿಸಿತ್ತು.

ವಿಮಾನದಲ್ಲಿ ಇಂಧನ ಸ್ವಿಚ್ ಎಂದರೇನು?

ಇಂಧನ ಸ್ವಿಚ್‌ಗಳು ವಿಮಾನದ ಎಂಜಿನ್‌ಗಳಿಗೆ ಇಂಧನದ ಹರಿವನ್ನು ನಿಯಂತ್ರಿಸುವ ಸ್ವಿಚ್‌ಗಳಾಗಿವೆ. ಇವುಗಳನ್ನು ಪೈಲಟ್‌ಗಳು ನೆಲದ ಮೇಲೆ ಎಂಜಿನ್‌ಗಳನ್ನು ಸ್ಟಾರ್ಟ್ ಮಾಡಲು ಅಥವಾ ನಿಲ್ಲಿಸಲು ಅಥವಾ ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯದ ಸಂದರ್ಭದಲ್ಲಿ ಎಂಜಿನ್‌ಗಳನ್ನು ಹಸ್ತಚಾಲಿತವಾಗಿ ಪ್ರಾರಂಭಿಸಲು ಅಥವಾ ನಿಲ್ಲಿಸಲು ಬಳಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ