ಏರ್ ಇಂಡಿಯಾ ವಿಮಾನ 
ದೇಶ

ಅಹಮದಾಬಾದ್ ದುರಂತದಿಂದ ಎಚ್ಚೆತ್ತ Air India: ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ; ಲಂಡನ್‌-ಬೆಂಗಳೂರು ವಿಮಾನ ಹಾರಾಟ ಸ್ಥಗಿತ!

ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

ನವದೆಹಲಿ: ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಇಂದು ಹೀಥ್ರೋದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ AI 132ರಲ್ಲಿ ಎಂಜಿನ್ ಸ್ಟಾರ್ಟ್ ಆಗುವ ಸಮಯದಲ್ಲಿ, ಎಡ ಎಂಜಿನ್‌ನಲ್ಲಿನ ಇಂಧನ ನಿಯಂತ್ರಣ ಸ್ವಿಚ್ ನಿಷ್ಕ್ರಿಯವಾಗಿದ್ದು, CUTOFF ಸ್ಥಾನಕ್ಕೆ ಮರಳಿತು ಎಂದು ತಿಳಿಸಿದೆ. ಪ್ರಯಾಣಿಕರ ಸುರಕ್ಷತೆಗಾಗಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಯಿತು ಎಂದು ಏರ್ ಇಂಡಿಯಾ ಹೇಳಿದೆ.

ಬೋಯಿಂಗ್ 787-8 ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ ನಿಷ್ಕ್ರಿಯವಾಗಿದೆ ಎಂದು ನಮ್ಮ ಪೈಲಟ್‌ಗಳಲ್ಲಿ ಒಬ್ಬರು ವರದಿ ಮಾಡಿದ್ದಾರೆ. ಈ ವಿಷಯವನ್ನು ವಾಯುಯಾನ ನಿಯಂತ್ರಕ DGCA ಗೆ ಸಹ ವರದಿ ಮಾಡಲಾಗಿದೆ. DGCA ನಿರ್ದೇಶನದ ನಂತರ, ಏರ್ ಇಂಡಿಯಾ ತನ್ನ ಫ್ಲೀಟ್‌ನಲ್ಲಿರುವ ಎಲ್ಲಾ ಬೋಯಿಂಗ್ 787 ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್‌ಗಳನ್ನು ಪರಿಶೀಲಿಸಿತು. ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಏರ್ ಇಂಡಿಯಾದಲ್ಲಿ ಪ್ರಮುಖ ಆದ್ಯತೆಯಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ಇಂಧನ ಸ್ವಿಚ್ ನಿಷ್ಕ್ರಿಯದಿಂದಾಗಿ ಸಂಭವಿಸಿತ್ತು.

ವಿಮಾನದಲ್ಲಿ ಇಂಧನ ಸ್ವಿಚ್ ಎಂದರೇನು?

ಇಂಧನ ಸ್ವಿಚ್‌ಗಳು ವಿಮಾನದ ಎಂಜಿನ್‌ಗಳಿಗೆ ಇಂಧನದ ಹರಿವನ್ನು ನಿಯಂತ್ರಿಸುವ ಸ್ವಿಚ್‌ಗಳಾಗಿವೆ. ಇವುಗಳನ್ನು ಪೈಲಟ್‌ಗಳು ನೆಲದ ಮೇಲೆ ಎಂಜಿನ್‌ಗಳನ್ನು ಸ್ಟಾರ್ಟ್ ಮಾಡಲು ಅಥವಾ ನಿಲ್ಲಿಸಲು ಅಥವಾ ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯದ ಸಂದರ್ಭದಲ್ಲಿ ಎಂಜಿನ್‌ಗಳನ್ನು ಹಸ್ತಚಾಲಿತವಾಗಿ ಪ್ರಾರಂಭಿಸಲು ಅಥವಾ ನಿಲ್ಲಿಸಲು ಬಳಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!

ಸದನದಲ್ಲಿ 'CM ಕುರ್ಚಿ ಕಿತ್ತಾಟ' ಪ್ರತಿಧ್ವನಿ: ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM ಡಿ.ಕೆ ಶಿವಕುಮಾರ್!

ಚೀನಾ ಸೇನೆಯಲ್ಲಿ ಭ್ರಷ್ಟಾಚಾರ ಕಡಿವಾಣಕ್ಕೆ ಭಾರಿ ಕ್ರಮ; ಪರಮಾಣು ಕ್ಷಿಪಣಿಗಳಲ್ಲಿ ಇಂಧನದ ಬದಲು ನೀರು!

'ವಿಬಿ-ಜಿ ರಾಮ್ ಜಿ' ಕಾನೂನು ವಾಪಸ್ ಪಡೆಯಲು ಮಹಾ ಪಂಚಾಯತ್ ಆಗ್ರಹ! ರಾಷ್ಟ್ರಪತಿಗೆ ಮನವಿ ಪತ್ರ

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video

SCROLL FOR NEXT