ಸುಪ್ರೀಂಕೋರ್ಟ್ 
ದೇಶ

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಒಂದು ತಿಂಗಳೊಳಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.

ನವದೆಹಲಿ: ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣದಲ್ಲಿ ಜಲವಿವಾದ ನ್ಯಾಯಮಂಡಳಿ ಸ್ಥಾಪನೆಗೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಅಂತರರಾಜ್ಯ ಪೆನ್ನೈಯಾರ್/ದಕ್ಷಿಣ ಪಿನಾಕಿನಿ ನದಿಯಿಂದ ಹರಿಯುವ ನೀರಿನ ಹಂಚಿಕೆ ಸಂಬಂಧ ತಮಿಳುನಾಡು ಮತ್ತು ಕರ್ನಾಟಕದ ನಡುವಿನ ವಿವಾದವನ್ನು ಇತ್ಯರ್ಥಪಡಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಒಂದು ತಿಂಗಳೊಳಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ. ಈ ಪ್ರಕರಣವು ಕನ್ನಡದಲ್ಲಿ ದಕ್ಷಿಣ ಪಿನಾಕಿನಿ ಎಂದು ಕರೆಯಲ್ಪಡುವ ಪೆನ್ನೈಯಾರ್ ನದಿಯ ನೀರಿನ ಹಂಚಿಕೆಗೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿದೆ.

ಈ ಹಿಂದೆ ನಡೆದ ಅರ್ಜಿ ವಿಚಾರಣೆ ವೇಳೆ ಪೀಠ ಉಭಯ ರಾಜ್ಯಗಳು ತಮ್ಮ ವಾದಗಳನ್ನು ನ್ಯಾಯಮಂಡಳಿಯಲ್ಲಿ ಮಂಡಿಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!