ಲೋಕಸಭೆ 
ದೇಶ

ವಿಪಕ್ಷಗಳ ಗದ್ದಲ, ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿದ ಸ್ಪೀಕರ್ ಓಂ ಬಿರ್ಲಾ!

ಇಂದು ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದ ಬಾವಿಗಿಳಿದ ವಿಪಕ್ಷ ಸದಸ್ಯರು, ಶರಣಾದ ಮೋದಿ ಎಂದು ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು.

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಕೆಲವೊಂದು ಅಂಶಗಳನ್ನು ಉಲ್ಲೇಖಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸ್ಪೀಕರ್ ಓಂ ಬಿರ್ಲಾ ಅನುಮತಿ ನಿರಾಕರಿಸಿದ್ದಕ್ಕಾಗಿ ವಿಪಕ್ಷಗಳು ಲೋಕಸಭೆಯಲ್ಲಿಂದು ತೀವ್ರ ಪ್ರತಿಭಟನೆ ನಡೆಸಿದವು.

ಇದರಿಂದಾಗಿ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ತದನಂತರ 2 ಗಂಟೆಗೆ ಮುಂದೂಡಲಾಯಿತು. ಇಂದು ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದ ಬಾವಿಗಿಳಿದ ವಿಪಕ್ಷ ಸದಸ್ಯರು, ಶರಣಾದ ಮೋದಿ ಎಂದು ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು.

ಸ್ಪೀಕರ್ ಕೇವಲ ಒಂದು ಪ್ರಶ್ನೆಯನ್ನಷ್ಟೇ ತೆಗೆದುಕೊಂಡರು. ತದನಂತರ ವಿಪಕ್ಷ ಸದಸ್ಯರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ವಿವಿಧ ರಂಗಗಳಲ್ಲಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಪ್ರಶ್ನೋತ್ತರ ಕಲಾಪ ವಿಪಕ್ಷಗಳಿಗೆ ನೆರವಾಗುತ್ತದೆ ಎಂದು ಹೇಳಿ ವಿಪಕ್ಷ ಸದಸ್ಯರನ್ನು ಮನವೊಲಿಸಲು ಯತ್ನಿಸಿದರು. ಆದರೆ, ವಿಪಕ್ಷ ಸದಸ್ಯರು ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ಯೋಜಿತ ರೀತಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ಸಂಸದರಿಗೆ ಯೋಗ್ಯವಲ್ಲ ಎಂದು ಬಿರ್ಲಾ ಹೇಳಿದ ಸ್ಪೀಕರ್, ಸುಮಾರು ಒಂದು ಗಂಟೆಗಳ ಕಾಲ ಕಲಾಪವನ್ನು ಮುಂದೂಡಿದರು. ಬಳಿಕ ಸಮಾವೇಶಗೊಂಡಾಗಲೂ ಪ್ರತಿಭಟನೆ ಮುಂದುವರೆದರಿಂದ ಕಲಾಪವನ್ನು ಮಧ್ಯಾಹ್ನ2 ಗಂಟೆಗೆ ಮುಂದೂಡಿದರು. ನಿನ್ನೆಯೂ ಇದೇ ವಿಚಾರವಾಗಿ ಲೋಕಸಭೆಯಲ್ಲಿ ಕೋಲಾಹಲವೇ ಉಂಟಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು, ಆಗುವ ನಷ್ಟ ಎಷ್ಟು ಗೊತ್ತಾ!

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!

SCROLL FOR NEXT