ದೆಹಲಿಯ ಸಂಸತ್ ಆವರಣದಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಇತರರು 
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಬೆನ್ನಲ್ಲೇ NDA ಸಂಸದೀಯ ಸಭೆ: ಪ್ರಧಾನಿ ಮೋದಿಗೆ ಸನ್ಮಾನ; Video

ಸಭೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಧಾನಮಂತ್ರಿಯನ್ನೂ, ಹಾಜರಿದ್ದ ಎಲ್ಲಾ ಎನ್‌ಡಿಎ ಸಂಸದರನ್ನು ಸ್ವಾಗತಿಸಿದರು.

ನವದೆಹಲಿ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಘೋಷಣೆಯಾದ ಬೆನ್ನಲ್ಲೇ ಇಂದು ಮಂಗಳವಾರ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ಆವರಣದಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಸಂಸದರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು.

ಸಭೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಧಾನಮಂತ್ರಿಯನ್ನೂ, ಹಾಜರಿದ್ದ ಎಲ್ಲಾ ಎನ್‌ಡಿಎ ಸಂಸದರನ್ನು ಸ್ವಾಗತಿಸಿದರು. ಇದು ಅಧಿವೇಶನದ ಅವಧಿಯಲ್ಲಿ ಮೈತ್ರಿಕೂಟದ ಬಲವಾದ ಏಕತೆಯನ್ನು ಎತ್ತಿ ತೋರಿಸಿತು.

ಎನ್‌ಡಿಎ ಸಂಸದರು ಸಂಸತ್ತಿನ ಎರಡೂ ಸದನಗಳಲ್ಲಿ ಬಜೆಟ್ ಅಧಿವೇಶನದ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ತಂತ್ರದ ಕುರಿತು ಚರ್ಚೆ ನಡೆಸಿದರು.

ಈ ಅಧಿವೇಶನದಲ್ಲಿ ಸರ್ಕಾರ ಕೆಲವು ಮಸೂದೆಗಳನ್ನು ತರಲು ಸಿದ್ಧವಾಗಿದೆ. ಆದ್ದರಿಂದ ತಂತ್ರದಲ್ಲಿ ಏಕತೆ ಮತ್ತು ಏಕರೂಪತೆ ಅತ್ಯಂತ ಅಗತ್ಯವಾಗಿದೆ. ನಾವು ಚರ್ಚಿಸಿ, ಈಗಿರುವಂತೆ ಬದ್ಧತೆಯಿಂದ ಮುಂದುವರಿಯಲು ನಿರ್ಧರಿಸಿದ್ದೇವೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಒಬ್ಬ ಎನ್‌ಡಿಎ ಸಂಸದರು ಹೇಳಿದರು.

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಯುವಜನತೆಗೆ ಪ್ರತಿದಿನ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ ಎಂದರು.

ಜಗತ್ತಿನ ಎರಡು ಅತ್ಯಂತ ಬಲಿಷ್ಠ ಪ್ರಜಾಸತ್ತಾತ್ಮಕ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಗಾಢವಾಗುತ್ತಿರುವ ಪರಿಣಾಮ ಬಹಳ ಧನಾತ್ಮಕ ಮತ್ತು ದೂರಗಾಮಿ ಆಗಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT