ಬ್ರಿಟಿಷ್ ಟೂರಿಸ್ಟ್  
ದೇಶ

ಭಾರತ ಬಿಟ್ಟು ತೊಲಗಿ: ಪ್ಯಾಲೆಸ್ತೀನ್‌ ಪರ ಸ್ಟಿಕ್ಕರ್ ಅಂಟಿಸಿದ ಇಬ್ಬರು ಬ್ರಿಟಿಷ್ ಟೂರಿಸ್ಟ್ ಗೆ ಸೂಚನೆ!

ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಲೂಯಿಸ್ ಗೇಬ್ರಿಯಲ್ ಡಿ ಹಾಗೂ ಅವರ ಗರ್ಲ್ ಫ್ರೆಂಡ್ ಅನುಶಿ ಎಮ್ಮಾ ಕ್ರಿಸ್ಟಿನ್ ಪುಷ್ಕರ್‌ನಲ್ಲಿ ತಂಗಿದ್ದರು.

ಅಜ್ಮೀರ್: ರಾಜಸ್ಥಾನದ ಅಜ್ಮೀರ್‌ನ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನ್‌ ಪರವಾಗಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಬ್ರಿಟಿಷ್ ದಂಪತಿಗೆ ಭಾರತವನ್ನು ತೊರೆಯುವಂತೆ ಸೂಚಿಸಲಾಗಿದೆ. ಗುಪ್ತಚರ ಇಲಾಖೆ (CID/IB) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸರಗೆ ಮಾಹಿತಿ ನೀಡಿದೆ. ನಂತರ ಇಬ್ಬರು ಬ್ರಿಟಿಷ್ ಪ್ರಜೆಗಳನ್ನು ವಿಚಾರಣೆಗೆ ಒಳಪಡಿಸಲಾಯಿತು.

ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಲೂಯಿಸ್ ಗೇಬ್ರಿಯಲ್ ಡಿ ಹಾಗೂ ಅವರ ಗರ್ಲ್ ಫ್ರೆಂಡ್ ಅನುಶಿ ಎಮ್ಮಾ ಕ್ರಿಸ್ಟಿನ್ ಪುಷ್ಕರ್‌ನಲ್ಲಿ ತಂಗಿದ್ದರು. ಜನವರಿ 21ರಂದು ಇವರು ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ತೊಡಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭಿಸಿತ್ತು. ಬಳಿಕ ಸಿಸಿಟಿವಿ ದೃಶ್ಯಾವಳಿ ಮತ್ತು ಸ್ಥಳೀಯ ಮಾಹಿತಿ ಆಧಾರದ ಮೇಲೆ ಶಂಕಿತರನ್ನು ಗುರುತಿಸಿದೆ.

ವಿಷಯ ಗಂಭೀರವಾಗಿದೆ ಎಂದು ಗುಪ್ತಚರ ಇಲಾಖೆ ಪರಿಗಣಿಸಿದ ಬಳಿಕ ನಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಿಐಡಿ) ರಾಜೇಶ್ ಮೀನಾ ನೇತೃತ್ವದ ತಂಡವು ವಿಚಾರಣೆಗೆ ಒಳಪಡಿಸಿತು. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದು ಷರತ್ತು ಉಲ್ಲಂಘಿಸಿ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.

ನಂತರ ಜಿಲ್ಲಾ ಪೊಲೀಸರ ನೆರವಿನೊಂದಿಗೆ ಸ್ಟಿಕ್ಕರ್‌ಗಳನ್ನು ತೆಗೆದುಹಾಕಲಾಯಿತು. ವಲಸೆ ಮತ್ತು ವಿದೇಶಿಯರ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಇಬ್ಬರೂ ವಿದೇಶಿ ಪ್ರಜೆಗಳ ವೀಸಾಗಳನ್ನು ರದ್ದುಪಡಿಸಿ, ದೇಶ ತೊರೆಯುವಂತೆ ನೋಟಿಸ್ ನೀಡಲಾಗಿದೆ.

ಪ್ರವಾಸಿ ವೀಸಾದಲ್ಲಿ ದೇಶದಲ್ಲಿದ್ದಾಗ ಯಾವುದೇ ರೀತಿಯ ರಾಜಕೀಯ, ಪ್ರತಿಭಟನೆ ಅಥವಾ ಸೈದ್ಧಾಂತಿಕ ಚಟುವಟಿಕೆಗಳಿಗೆ ಅನುಮತಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ-Video

ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ; ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್; Video

Operation KIYA: ಉಧಂಪುರದಲ್ಲಿ ಎನ್ಕೌಂಟರ್; ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಸದೆಬಡಿದ ಭಾರತೀಯ ಸೇನೆ..! Video

ಎನ್ ಸಿಪಿ ಬಣಗಳ ವಿಲೀನ? ಶರದ್ ಪವಾರ್, ಅಜಿತ್ ಪವಾರ್ ಪುತ್ರರ ನಡುವೆ ಮಹತ್ವದ ಮಾತುಕತೆ!

ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ವ್ಯಕ್ತಿಯ ಹತ್ಯೆ: MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು; ಇದೇನಿದು ಹರಿಪ್ರಸಾದ್ ಆರೋಪ?

SCROLL FOR NEXT