ಅಜಿತ್ ಪವಾರ್ ಪುತ್ರರು 
ದೇಶ

NCP ಬಣಗಳ ವಿಲೀನ? ಶರದ್ ಪವಾರ್, ಅಜಿತ್ ಪವಾರ್ ಪುತ್ರರ ನಡುವೆ ಮಹತ್ವದ ಮಾತುಕತೆ!

ಪವಾರ್ ಕುಟುಂಬದ ಹುಟ್ಟೂರಾದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಎಂಬ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಭೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆದಿದೆ. ಆದರೆ ಏನೆಲ್ಲಾ ಮಾತುಕತೆಗಳು ನಡೆದಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

ಮುಂಬೈ: ಮಹಾರಾಷ್ಟ್ರದಲ್ಲಿ ಎನ್ ಸಿಪಿ ಬಣಗಳ ವಿಲೀನ ಮಾತುಗಳು ಕೇಳಿಬರುತ್ತಿರುವಂತೆಯೇ ಮಹಾರಾಷ್ಟ್ರದ ದಿವಂಗತ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರರಾದ ಪಾರ್ಥ ಪವಾರ್ ಮತ್ತು ಜಯ್ ಪವಾರ್ ಬುಧವಾರ ಬಾರಾಮತಿಯಲ್ಲಿ ಎನ್‌ಸಿಪಿ (SP) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಪವಾರ್ ಕುಟುಂಬದ ಹುಟ್ಟೂರಾದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಎಂಬ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಭೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆದಿದೆ. ಆದರೆ ಏನೆಲ್ಲಾ ಮಾತುಕತೆಗಳು ನಡೆದಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

ಎರಡು ಎನ್‌ಸಿಪಿ ಬಣಗಳ ವಿಲೀನ ಮತ್ತು ಮುಂಬರುವ ಜಿಲ್ಲಾ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾತುಕತೆ ನಡೆದಿರಬಹುದು ಎನ್ನಲಾಗಿದೆ.

ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಜನವರಿ 28 ರಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು. ಆದಾದ ಮೂರು ದಿನಗಳ ನಂತರ ಅವರ ಪತ್ನಿ ಸುನೇತ್ರಾ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಜಿತ್ ಪವಾರ್ ಮೃತಪಟ್ಟ ನಂತರ ವಿಲೀನದ ಮಾತುಕತೆಗಳು ನಡೆಯುತ್ತಿವೆ. ಎನ್‌ಸಿಪಿ ಬಣಗಳ ವಿಲೀನ ಘೋಷಿಸಲು ಫೆಬ್ರವರಿ 12 ರ ದಿನಾಂಕವನ್ನು ಅಜಿತ್ ಪವಾರ್ ಅಂತಿಮಗೊಳಿಸಿದ್ದರು ಎಂದು ಶರದ್ ಪವಾರ್ ಮತ್ತು ಅವರ ಪಕ್ಷದ ಇತರ ನಾಯಕರು ಹೇಳಿದ್ದಾರೆ.

ಆದರೆ, ಇಂತಹ ಹೇಳಿಕೆಗಳನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಳ್ಳಿಹಾಕಿದ್ದು, ವಿಲೀನದ ಮಾತುಕತೆಗಳು ನಡೆಯುತ್ತಿದ್ದರೆ ಅಜಿತ್ ಪವಾರ್ ನನ್ನೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ-Video

ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ; ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್; Video

Operation KIYA: ಉಧಂಪುರದಲ್ಲಿ ಎನ್ಕೌಂಟರ್; ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಸದೆಬಡಿದ ಭಾರತೀಯ ಸೇನೆ..! Video

ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ವ್ಯಕ್ತಿಯ ಹತ್ಯೆ: MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು; ಇದೇನಿದು ಹರಿಪ್ರಸಾದ್ ಆರೋಪ?

ದೇಶದ್ರೋಹಿ ಟೀಕೆ: ಸಂಸತ್ ಆವರಣದಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ಮಾತಿನ ಚಕಮಕಿ!

SCROLL FOR NEXT