ಸಂಜಯ್ ರಾವತ್  
ದೇಶ

ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ; ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್; Video

ಈಗ ಅಮೆರಿಕ ತಮ್ಮ ಕೃಷಿ ಉತ್ಪನ್ನಗಳನ್ನು ಭಾರತೀಯ ರೈತರ ಮಾರುಕಟ್ಟೆಯಲ್ಲಿ ಅಗ್ಗದ ದರದಲ್ಲಿ ಮಾರಾಟ ಮಾಡಬಹುದು. ಇದು ಭಾರತೀಯ ರೈತರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಮುಂಬೈ: ಅಮೆರಿಕ ಹೊಸ ವ್ಯಾಪಾರದೊಂದಿಗೆ ಭಾರತವನ್ನು ಬಹುತೇಕ ಖರೀದಿಸಿದೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತ ಹಾಗೂ ಅಮೆರಿಕ ನಡುವಿನ ಹೊಸ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನಾಡಿರುವ ಸಂಜಯ್ ರಾವತ್, ಭಾರತದ ರೈತರ ಆರ್ಥಿಕ ಬೆಳವಣಿಗೆ ಹಾಗೂ ಯೋಗಕ್ಷಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈಗ ಅಮೆರಿಕ ತಮ್ಮ ಕೃಷಿ ಉತ್ಪನ್ನಗಳನ್ನು ಭಾರತೀಯ ರೈತರ ಮಾರುಕಟ್ಟೆಯಲ್ಲಿ ಅಗ್ಗದ ದರದಲ್ಲಿ ಮಾರಾಟ ಮಾಡಬಹುದು. ಇದು ಭಾರತೀಯ ರೈತರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಈ ವ್ಯಾಪಾರ ಒಪ್ಪಂದದೊಂದಿಗೆ ಅಮೆರಿಕ ಭಾರತವನ್ನು ಬಹುತೇಕ ಖರೀದಿಸಿದೆ. ಅವರು ಗೆಲುವು ಅಂತಾ ಹೇಳ್ತಾರೆ. ಆದರೆ ಇದು ಹೇಗೆ ಗೆಲುವು? ಶೇ.18 ರಷ್ಟು ಸುಂಕವನ್ನು ನಿಗದಿಪಡಿಸಲಾಗಿದೆ. ಇದು ಮೊದಲು ಶೇಕಡಾ 3 ರಷ್ಟಿತ್ತು. ಅಮೆರಿಕದ ಕೃಷಿ ಉತ್ಪನ್ನಗಳು ಶೂನ್ಯ ಸುಂಕದೊಂದಿಗೆ ಭಾರತದ ಕೃಷಿ ಮಾರುಕಟ್ಟೆಯನ್ನು ಪ್ರವೇಶಿಸುತ್ತವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಧಾನ್ಯಗಳು, ಹಣ್ಣುಗಳು ಮತ್ತು ಡೈರಿ ಉತ್ಪನ್ನಗಳನ್ನುಇದು ಒಳಗೊಂಡಿರುತ್ತದೆ. ನಮ್ಮ ರೈತರು ಕಷ್ಟಪಟ್ಟು, ಹಗಲಿರುಳು ಶ್ರಮಿಸಿ ಈ ಸರಕುಗಳನ್ನು ಉತ್ಪಾದಿಸುತ್ತಾರೆ. ಈಗ ಅಮೆರಿಕ ತನ್ನ ಉತ್ಪನ್ನಗಳನ್ನು ನಮ್ಮ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತದೆ. ಹೀಗಾದರೆ ನಮ್ಮ ರೈತರಿಗೆ ಏನಾಗುತ್ತದೆ? ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ...? ಎಂದು ಅವರು ಪ್ರಶ್ನಿಸಿದ್ದು, ಪ್ರಾಯೋಗಿಕವಾಗಿ ಹೀಗೆ ದೇಶವನ್ನು ಮಾರಾಟ ಮಾಡಿದಂತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಭಾರತ-ಯುಎಸ್ ವ್ಯಾಪಾರ ಒಪ್ಪಂದಡಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 18 ಕ್ಕೆ ಇಳಿಸಿದ್ದು, ದೇಶದಲ್ಲಿ ರಾಜಕೀಯ ಗದ್ದಲ ಉಂಟಾಗಿದೆ. ಕೃಷಿ ಮತ್ತು ಹೈನುಗಾರಿಕೆಯನ್ನು ಸಂರಕ್ಷಿಸಲಾಗಿದೆ ಎಂಬ ಹೇಳಿಕೆಗಳನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಸುಂಕವನ್ನು ಶೇ.25 ರಿಂದ ಶೇ.18ಕ್ಕೆ ಇಳಿಸುವ ಬಗ್ಗೆ ಸ್ಪಷ್ಟತೆ ಕೋರಿದೆ.

ಭಾರತ ಕೂಡಾ ಅಮೆರಿಕದ ಕೆಲವು ಸರಕುಗಳ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಬಹುದು ಮತ್ತು 500 ಶತಕೋಟಿ ಮೊತ್ತದ ಅಮೆರಿಕದ ಇಂಧನ, ತಂತ್ರಜ್ಞಾನ, ಕಲ್ಲಿದ್ದಲು ಮತ್ತು ಇತರ ಅನೇಕ ಉತ್ಪನ್ನಗಳನ್ನು ಖರೀದಿಸಬಹುದು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಹೇಳಿಕೆಗಳನ್ನು ಕೇಂದ್ರ ಸರ್ಕಾರ ಇನ್ನೂ ಇನ್ನೂ ದೃಢೀಕರಿಸಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ-Video

Operation KIYA: ಉಧಂಪುರದಲ್ಲಿ ಎನ್ಕೌಂಟರ್; ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಸದೆಬಡಿದ ಭಾರತೀಯ ಸೇನೆ..! Video

ಎನ್ ಸಿಪಿ ಬಣಗಳ ವಿಲೀನ? ಶರದ್ ಪವಾರ್, ಅಜಿತ್ ಪವಾರ್ ಪುತ್ರರ ನಡುವೆ ಮಹತ್ವದ ಮಾತುಕತೆ!

ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ವ್ಯಕ್ತಿಯ ಹತ್ಯೆ: MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು; ಇದೇನಿದು ಹರಿಪ್ರಸಾದ್ ಆರೋಪ?

ದೇಶದ್ರೋಹಿ ಟೀಕೆ: ಸಂಸತ್ ಆವರಣದಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ಮಾತಿನ ಚಕಮಕಿ!

SCROLL FOR NEXT