ಸಾಂದರ್ಭಿಕ ಚಿತ್ರ 
ದೇಶ

ಮೇಘಾಲಯ: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; ಕನಿಷ್ಠ 16 ಕಾರ್ಮಿಕರು ಸಾವು

"ನಾವು ಇಲ್ಲಿಯವರೆಗೆ 16 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ಖಚಿತಪಡಿಸಲಾಗಿಲ್ಲ. ಹೀಗಾಗಿ ಹೆಚ್ಚಿನ ಜನ ಸಿಕ್ಕಿಬಿದ್ದಿರುವ ಶಂಕೆ ಇದೆ" ಎಂದು ಅವರು ತಿಳಿಸಿದ್ದಾರೆ.

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ "ಅಕ್ರಮ" ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಐ ನೊಂಗ್ರಾಂಗ್ ಅವರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅವರು ಹೇಳಿದ್ದಾರೆ.

"ನಾವು ಇಲ್ಲಿಯವರೆಗೆ 16 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ಖಚಿತಪಡಿಸಲಾಗಿಲ್ಲ. ಹೀಗಾಗಿ ಹೆಚ್ಚಿನ ಜನ ಸಿಕ್ಕಿಬಿದ್ದಿರುವ ಶಂಕೆ ಇದೆ" ಎಂದು ಅವರು ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆರಂಭದಲ್ಲಿ ಸುಟ್ಂಗಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ನಂತರ ಉತ್ತಮ ಚಿಕಿತ್ಸೆಗಾಗಿ ಶಿಲ್ಲಾಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೂರ್ವ ಜೈಂಟಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ಹೇಳಿದ್ದಾರೆ.

ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದ್ದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಗಣಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

ಗಣಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಕೇಳಿದಾಗ, ಕುಮಾರ್, "ಹೌದು, ಅದು ಹಾಗೆ ತೋರುತ್ತದೆ" ಎಂದು ಹೇಳಿದರು. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!

ಹಿಂದಿನ ತಪ್ಪುಗಳನ್ನು ಸರಿಪಡಿಸಲು ನಮ್ಮ ಎನರ್ಜಿ ವ್ಯಯ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ; ಪ್ರತಿಪಕ್ಷಗಳಿಂದ ಸಭಾತ್ಯಾಗ

ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿ ಮೋದಿ ವಿರುದ್ಧ 'ಅನಿರೀಕ್ಷಿತ ಕೃತ್ಯ'ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪ; Video

T20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಆಡಲು ಪಾಕ್ ನಕಾರ, ಸೂರ್ಯ ಕುಮಾರ್ ಯಾದವ್ ಸ್ಪಷ್ಟ ನಿಲುವು!

SCROLL FOR NEXT