ಸುಪ್ರೀಂ ಕೋರ್ಟ್ online desk
ದೇಶ

ಯುವತಿ, ಮಹಿಳೆಯರಿಗೆ ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲಾಗದು; 30 ವಾರಗಳ ನಂತರವೂ ಗರ್ಭಪಾತದ ಹಕ್ಕಿದೆ- ಸುಪ್ರೀಂ ಕೋರ್ಟ್

ಮಹಿಳೆಗೆ ಗರ್ಭಧಾರಣೆಯನ್ನು ಮುಂದುವರಿಸಲು ನ್ಯಾಯಾಲಯಗಳು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಗರ್ಭಿಣಿಯಾಗಿರುವ ಮಹಿಳೆಗೆ ಆ ಮಗು ಬೇಡ ಎನಿಸಿದರೆ, 30 ವಾರಗಳ ಬಳಿಕವೂ ಆ ಗರ್ಭಧಾರಣೆಯನ್ನು ತೆಗೆಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

17 ವರ್ಷದ ಬಾಲಕಿಗೆ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ತೆಗೆಯುವುದಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಅಪ್ರಾಪ್ತ ವಯಸ್ಕ, ಮಹಿಳೆಗೆ ಗರ್ಭಧಾರಣೆಯನ್ನು ಮುಂದುವರಿಸಲು ನ್ಯಾಯಾಲಯಗಳು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ನೆರೆಹೊರೆಯ ಹುಡುಗನೊಂದಿಗಿನ ಸಂಬಂಧದಲ್ಲಿರುವಾಗ ಹುಡುಗಿ ಗರ್ಭಿಣಿಯಾಗಿದ್ದಾಳೆ ಎಂದು ಗಮನಿಸಿ, ವೈದ್ಯಕೀಯವಾಗಿ ಅವಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಅನುಮತಿ ನೀಡಿದೆ.

ಅಗತ್ಯವಿರುವ ಎಲ್ಲಾ ವೈದ್ಯಕೀಯ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಾಗ ಅಪ್ರಾಪ್ತೆಯ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸಲು ಕೈಗೊಳ್ಳಲು ಮುಂಬೈನ ಜೆಜೆ ಆಸ್ಪತ್ರೆಗೆ ಪೀಠ ಸೂಚನೆ ನೀಡಿದೆ.

ಗರ್ಭಧಾರಣೆಯನ್ನು ಮುಂದುವರಿಸಲು ಅಪ್ರಾಪ್ತ ಮಗುವಿಗೆ ಇರುವ ಹಕ್ಕು, ಮೇಲ್ನೋಟಕ್ಕೆ ಅದು "ನ್ಯಾಯಸಮ್ಮತವಲ್ಲ" ಏಕೆಂದರೆ ಅವಳು ಸ್ವತಃ ಅಪ್ರಾಪ್ತ ವಯಸ್ಕಳಾಗಿದ್ದಳು ಮತ್ತು ಸಂಬಂಧದಿಂದ ಉದ್ಭವಿಸಿದ ದುರದೃಷ್ಟಕರ ಪರಿಸ್ಥಿತಿಯಿಂದಾಗಿ ಗರ್ಭಧಾರಣೆಯನ್ನು ಎದುರಿಸುತ್ತಿದ್ದಾಳೆ ಎಂದು ಕೋರ್ಟ್ ಹೇಳಿದೆ.

ಸಂಬಂಧ ಒಪ್ಪಿಗೆಯಿಂದಾಗಿದೆಯೇ ಅಥವಾ ಲೈಂಗಿಕ ದೌರ್ಜನ್ಯದ ಪರಿಣಾಮವೇ ಎಂಬುದು ಮುಖ್ಯವಲ್ಲ ಎಂದು ಕೋರ್ಟ್ ಹೇಳಿದೆ. ಅರ್ಜಿ ಸಲ್ಲಿಸಿರುವ ಅಪ್ರಾಪ್ತ ಯುವತಿಯ ವಯಸ್ಸು ಮತ್ತು ಆಕೆಯ ಹಕ್ಕನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆ ಯುವತಿಯದ್ದು ಉದ್ದೇಶಪೂರ್ವಕವಾದ ಗರ್ಭಧಾರಣೆ ಅಲ್ಲದ ಕಾರಣದಿಂದ ಮತ್ತು ಆ ಹುಡುಗಿ ಮಗುವನ್ನು ಹೆರಲು ಬಯಸದ ಕಾರಣದಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಹೇಳಿದೆ.

ಹುಡುಗಿ 17ನೇ ವಯಸ್ಸಿನಲ್ಲಿ ಗರ್ಭ ಧರಿಸಿದ್ದಳು. ಆಕೆಗೆ ಈಗ 18 ವರ್ಷ. ಈಗ ಆಕೆಯ ಗರ್ಭಧಾರಣೆಯು 30 ವಾರಗಳನ್ನು ತಲುಪಿತ್ತು. ಸ್ನೇಹಿತನೊಂದಿಗಿನ ಸಂಬಂಧದಿಂದ ಆಕೆ ಗರ್ಭಿಣಿಯಾಗಿದ್ದು, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ಆ ಹುಡುಗಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಆಘಾತಕಾರಿಯಾಗಿದೆ ಎಂದು ವಾದಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ!

ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

ಪೂರ್ವ ಏಷ್ಯಾ ಸಂಘರ್ಷ: ಅವಾಸ್ತವಿಕ, ಅಸಮಂಜಸ..; ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆ ತಿರಸ್ಕರಿಸಿದ Iran

ಬಾಗಲಕೋಟೆ ಉಪಚುನಾವಣೆ: ಸಿದ್ದರಾಮಯ್ಯ, ವಿಜಯೇಂದ್ರಗೆ ಪ್ರತಿಷ್ಠೆಯ ಕಣ; ಭರ್ಜರಿ ಪ್ರಚಾರ!

SCROLL FOR NEXT