ಪಪ್ಪು ಯಾದವ್  
ದೇಶ

1995ರ ಪಾಟ್ನಾ ಪ್ರಕರಣದಲ್ಲಿ ಸಂಸದ ಪಪ್ಪು ಯಾದವ್ ಬಂಧನ; ಸೇಡಿನ ಕೃತ್ಯ ಎಂದ ರಾಹುಲ್ ಗಾಂಧಿ

ಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಐಜಿಐಎಂಎಸ್) ದಾಖಲಿಸಲಾಯಿತು ಮತ್ತು ನಂತರ ತಪಾಸಣೆಗಾಗಿ ಇಂದಿರಾ ಗಾಂಧಿ ಹೃದ್ರೋಗ ಸಂಸ್ಥೆಗೆ(ಐಜಿಐಸಿ) ಕರೆದೊಯ್ಯಲಾಯಿತು.

ಪಾಟ್ನಾ: 1995ರ ಪಾಟ್ನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಡರಾತ್ರಿ ಪಪ್ಪು ಯಾದವ್ ಎಂದೂ ಕರೆಯಲ್ಪಡುವ ಪೂರ್ಣಿಯಾ ಸಂಸದ ರಾಜೇಶ್ ರಂಜನ್ ಅವರನ್ನು ಬಂಧಿಸಲಾಗಿದ್ದು, ನಂತರ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಶನಿವಾರ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ದಾಖಲಿಸಲಾಗಿದೆ.

ಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಐಜಿಐಎಂಎಸ್) ದಾಖಲಿಸಲಾಯಿತು ಮತ್ತು ನಂತರ ತಪಾಸಣೆಗಾಗಿ ಇಂದಿರಾ ಗಾಂಧಿ ಹೃದ್ರೋಗ ಸಂಸ್ಥೆಗೆ(ಐಜಿಐಸಿ) ಕರೆದೊಯ್ಯಲಾಯಿತು.

1995ರಲ್ಲಿ ಪಪ್ಪು ಯಾದವ್ ಅವರು ವೈಯಕ್ತಿಕ ಬಳಕೆಗಾಗಿ ಎಂದು ಮನೆ ಬಾಡಿಗೆಗೆ ಪಡೆದು, ಬಳಿಕ ಅದನ್ನು ರಾಜಕೀಯ ಕಚೇರಿಯನ್ನಾಗಿ ಪರಿವರ್ತಿಸಿದ್ದರು ಎಂದು ಆರೋಪಿಸಿ ಮನೆ ಮಾಲೀಕರಾದ ವಿನೋದ್ ಬಿಹಾರಿ ಲಾಲ್, ಪಾಟ್ನಾದ ಗರ್ದಾನಿಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ವಂಚನೆ, ನಕಲಿ ದಾಖಲೆ, ಅತಿಕ್ರಮಣ, ಕ್ರಿಮಿನಲ್ ಬೆದರಿಕೆ ಮತ್ತು ಪಿತೂರಿ ಆರೋಪಗಳನ್ನು ಮಾಡಲಾಗಿತ್ತು.

ಈ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಪಪ್ಪು ಯಾದವ್ ಅವರನ್ನು ಬಂಧಿಸಲಾಗಿದೆ.

ನಿನ್ನೆ ರಾತ್ರಿ ಪೊಲೀಸರು ಬಂಧನಕ್ಕಾಗಿ ಆಗಮಿಸಿದ ವೇಳೆ, ಪೊಲೀಸರೊಂದಿಗೆ ಹೋಗಲು ನಿರಾಕರಿಸಿದ ಪಪ್ಪು ಯಾದವ್​, ನ್ಯಾಯಾಲಯ ಹೊರಡಿಸಿರುವ ವಾರಂಟ್​​​ ಬಂಧನದ್ದಲ್ಲ. ಕೇವಲ ಆಸ್ತಿ ಮುಟ್ಟುಗೋಲು ಎಂದು ವಾದಿಸಿದರು ಎಂದು ಹೇಳಲಾಗಿದೆ.

ಕಡೆಗೂ ಪೊಲೀಸರು ಅವರನ್ನು ಬಂಧಿಸಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿದ್ದ ಅಧಿವೇಶನದಲ್ಲಿ ಭಾಗಿಯಾಗಿದ್ದ ಯಾದವ್​ ಮನೆಗೆ ಮರಳಿದ ಒಂದು ಗಂಟೆಯ ಬಳಿಕ ಈ ಬಂಧನ ನಡೆದಿದೆ. ಈ ವೇಳೆ ಯಾದವ್​ ಬೆಂಬಲಿಗರು ಅವರ ಮನೆಯ ಸುತ್ತ ಸುತ್ತುವರೆದಿದ್ದರು.

ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಪ್ಪು ಯಾದವ್‌ಗೆ ಬೆಂಬಲಕ್ಕೆ ನಿಂತಿದ್ದು, "ಪಾಟ್ನಾದಲ್ಲಿ ನೀಟ್ ಆಕಾಂಕ್ಷಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು, ರಾಜ್ಯ ಸರ್ಕಾರದ ನ್ಯೂನತೆಗಳನ್ನು ಯಾದವ್ ಬಹಿರಂಗಪಡಿಸಿದ್ದಾರೆ. ವಿದ್ಯಾರ್ಥಿನಿ ಕುಟುಂಬ ನ್ಯಾಯಯುತ ತನಿಖೆ ಕೋರಿದಾಗ, ಬಿಜೆಪಿ-ಎನ್‌ಡಿಎ ಅದೇ ಹಳೆಯ ನಾಟಕ ಶುರು ಮಾಡಿದ್ದು, ಪ್ರಕರಣವನ್ನು ಹಳಿತಪ್ಪಿಸಲಾಗುತ್ತಿದೆ ಮತ್ತು ಅಪರಾಧಿಗಳನ್ನು ರಕ್ಷಿಸಲಾಗುತ್ತಿದೆ" ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಈ ಮಗಳಿಗೆ ನ್ಯಾಯಕ್ಕಾಗಿ ದೃಢವಾಗಿ ಧ್ವನಿಯೆತ್ತಿದ್ದು ಸಹ ಸಂಸದ ಪಪ್ಪು ಯಾದವ್. ಇಂದು ಅವರ ಬಂಧನವು ಸ್ಪಷ್ಟವಾಗಿ ರಾಜಕೀಯ ದ್ವೇಷದ ಕೃತ್ಯವಾಗಿದ್ದು, ಪ್ರಶ್ನಿಸುವ ಪ್ರತಿಯೊಂದು ಧ್ವನಿಯನ್ನು ಅಡಗಿಸುವ ಗುರಿ ಹೊಂದಿದೆ " ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವ್ಯಾಪಾರ ಒಪ್ಪಂದದಲ್ಲಿ ಪಾಕಿಸ್ತಾನಕ್ಕೆ ಸದ್ದಿಲ್ಲದೆ 'ಶಾಕ್' ನೀಡಿದ ಅಮೆರಿಕಾ !

ತಂಡಕ್ಕೆ ತಕ್ಕಂತೆ ICC ನಿಯಮ ಬದಲಾಗುತ್ತಾ? India ಫೀಲ್ಡರ್ ಹಿಡಿದ ಕ್ಯಾಚ್ ನೌಟೌಟ್, ಅದೇ Pak ಹಿಡಿದರೇ ಔಟ್, video!

ಅಜಿತ್ ಪವಾರ್ ಸಾವಿನ ಬಗ್ಗೆ ಇನ್ನೂ ಅನುಮಾನ ಇದೆ: ಶಾಸಕ ರೋಹಿತ್ ಪವಾರ್

ಮುಂಬಯಿ ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆ

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

SCROLL FOR NEXT