ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಪೋಷಕರು ಬೈದಿದ್ದಕ್ಕೆ ನಾಲ್ವರು ಹುಡುಗಿಯರು ಆತ್ಮಹತ್ಯೆಗೆ ಶರಣು!

ಹಸ್ಪುರ ಪೊಲೀಸ್ ಠಾಣೆ ಪ್ರದೇಶದ ದಲಿತರ ಓಣಿಯಲ್ಲಿ 10 ರಿಂದ 14 ವರ್ಷ ವಯಸ್ಸಿನ ಐದು ಹುಡುಗಿಯರು ವಿಷ ಸೇವಿಸಿದ್ದರು ಎಂದು ವರದಿಯಾಗಿದ್ದು, ಅವರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಹುಡುಗರೊಂದಿಗೆ ಹೆಚ್ಚು ಬೆರೆಯಬೇಡಿ ಎಂದು ಪೋಷಕರು ಬೈದಿದ್ದಕ್ಕೆ ನೊಂದ ನಾಲ್ವರು ಹುಡುಗಿಯರು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಜನವರಿ 29 ರಂದು ಹಸ್ಪುರ ಪೊಲೀಸ್ ಠಾಣೆ ಪ್ರದೇಶದ ದಲಿತರ ಓಣಿಯಲ್ಲಿ 10 ರಿಂದ 14 ವರ್ಷ ವಯಸ್ಸಿನ ಐದು ಹುಡುಗಿಯರು ವಿಷ ಸೇವಿಸಿದ್ದರು ಎಂದು ವರದಿಯಾಗಿದ್ದು, ಅವರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯಿಲ್ಲದೆ ಅದೇ ದಿನ ಅವರನ್ನು ಅಂತ್ಯಕ್ರಿಯೆ ಮಾಡಲಾಯಿತು ಮತ್ತು ಸ್ಥಳೀಯ ಮಾಧ್ಯಮಗಳು ಅದನ್ನು ವರದಿ ಮಾಡಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಅಂಬರೀಶ್ ರಾಹುಲ್, "ಬದುಕುಳಿದ ಹುಡುಗಿಯ ಹೇಳಿಕೆಯ ಪ್ರಕಾರ, ಹುಡುಗರ ಗುಂಪಿನೊಂದಿಗೆ ಹೆಚ್ಚು ಬೆರೆತಿದ್ದಕ್ಕಾಗಿ ಅವರ ಪೋಷಕರು ಗದರಿಸಿದ್ದಾರೆ. ಇದರಿಂದ ನೊಂದ ಬಾಲಕಿಯರು ವಿಷಕಾರಿ ವಸ್ತು ಸೇವಿಸಲು ನಿರ್ಧರಿಸಿದ್ದರು" ಎಂದು ತಿಳಿಸಿದ್ದಾರೆ.

ಒಂದು ಹೊಲದಲ್ಲಿ ಐವರು ಒಟ್ಟಿಗೆ ವಿಷ ಸೇವಿಸಿದ್ದಾಗಿ ರಾಹುಲ್ ಅವರು ಮಾಹಿತಿ ನೀಡಿದ್ದಾರೆ.

ವಿಷ ಸೇವಿಸಿ ನಾಲ್ವರು ಹುಡುಗಿಯರು ಸಾವನ್ನಪ್ಪಿದ್ದು, ಬದುಕುಳಿದ ಐದನೇ ಹುಡುಗಿ ಮನೆಗೆ ತೆರಳಿ ಘಟನೆಯ ಬಗ್ಗೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾಳೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

"ಪ್ರಕರಣದ ತನಿಖೆ ಇನ್ನೂ ಮುಂದುವರೆದಿದೆ. ಇದೀಗ, ಬದುಕುಳಿದ ಹುಡುಗಿಯ ಹೇಳಿಕೆ ಮಾತ್ರ ನಮಗೆ ಸಿಕ್ಕಿದೆ" ಎಂದು ಪಿಟಿಐ ಜೊತೆ ಮಾತನಾಡಿದ ದೌದ್‌ನಗರ ಎಸ್‌ಡಿಪಿಒ ಅಶೋಕ್ ಕುಮಾರ್ ದಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

ನಮ್ಮ ಮುಂದೆ ನಡೆಯಲ್ಲ ಬಹಿಷ್ಕಾರದ ಆಟ: ಪಾಕಿಸ್ತಾನದ ಷರತ್ತುಗಳನ್ನು ತಿರಸ್ಕರಿಸಿದ ICC; ಅಡಕತ್ತರಿಯಲ್ಲಿ ಬಾಂಗ್ಲಾ!

'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ 'ಸುಪ್ರೀಂ' ಶಾಕ್

Sensex 485, Nifty 173 ಅಂಕ ಏರಿಕೆ, ಟೈಟನ್ ಷೇರು ಮೌಲ್ಯ ಶೇ.3%, ಅಲ್ಟ್ರಾಟೆಕ್ ಷೇರು ಮೌಲ್ಯ ಶೇ.2%ರಷ್ಟು ಏರಿಕೆ!

SCROLL FOR NEXT