ರಾಹುಲ್ ಗಾಂಧಿ 
ದೇಶ

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಪುಸ್ತಕದಲ್ಲಿನ ವಿಷಯಗಳಿಗೆ "ಭಯ" ಪಟ್ಟು ಮೋದಿ ಲೋಕಸಭೆಗೆ ಬಂದಿಲ್ಲ ಎಂದಿದ್ದಾರೆ.

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಗೆ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಪುಸ್ತಕ(ಆತ್ಮಚರಿತ್ರೆ)ದಲ್ಲಿನ ವಿಷಯಗಳಿಗೆ "ಭಯ" ಪಟ್ಟು ಮೋದಿ ಲೋಕಸಭೆಗೆ ಬಂದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಭದ್ರತಾ ಬೆದರಿಕೆ ಇತ್ತು ಎಂಬ ಹೇಳಿಕೆಯನ್ನು ತಳ್ಳಿಹಾಕಿದ ಲೋಕಸಭೆ ಪ್ರತಿಪಕ್ಷ ನಾಯಕ, ಆರೋಪ ಮಾಡುವ ಬದಲು ಕ್ರಮ ಕೈಗೊಳ್ಳಬೇಕು ಎಂದು ಸವಾಲು ಹಾಕಿದರು.

"ಯಾರಾದರೂ ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಹೇಳಿದ್ದರೆ. ದಯವಿಟ್ಟು ಎಫ್‌ಐಆರ್ ಮಾಡಿ, ಆ ವ್ಯಕ್ತಿಯನ್ನು ಬಂಧಿಸಿ. ನೀವು ಅದನ್ನು ಏಕೆ ಮಾಡುತ್ತಿಲ್ಲ" ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

"ಅದರ ಬಗ್ಗೆ ಯಾವುದೇ ಉತ್ತರ ಇಲ್ಲ. ಪ್ರಧಾನಿ ಸದನಕ್ಕೆ ಬರಲು ಹೆದರುತ್ತಿದ್ದರು ಎಂಬುದು ಇದರಿಂದ ಸ್ಪಷ್ಟವಾಗಿದೆ. ಸದಸ್ಯರ ಕಾರಣದಿಂದಾಗಿ ಅಲ್ಲ, ನಾನು ಹೇಳುತ್ತಿದ್ದ ಪುಸ್ತಕದ ಕಾರಣದಿಂದ. ಮೋದಿ ಇನ್ನೂ ಭಯಭೀತರಾಗಿದ್ದಾರೆ. ಏಕೆಂದರೆ ಅವರು ಸತ್ಯವನ್ನು ಎದುರಿಸಲು ಸಾಧ್ಯವಿಲ್ಲ" ಎಂದು ಗಾಂಧಿ ಗಾಂಧಿ ತಿಳಿಸಿದರು.

"ಕಾಂಗ್ರೆಸ್ ಸದಸ್ಯರು ಪ್ರಧಾನಿ ಮೇಲೆ ದಾಳಿ ಮಾಡುವ ಪ್ರಶ್ನೆಯೇ ಇಲ್ಲ" ಎಂದ ಅವರು, ಮೋದಿ ಸದನವನ್ನು ಎದುರಿಸಲು ಧೈರ್ಯ ಮಾಡಬೇಕಿತ್ತು ಎಂದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪುಸ್ತಕ ಪ್ರಕಟವಾಗಿಲ್ಲ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಆದರೆ ಆ "ಪುಸ್ತಕವನ್ನು ಪ್ರಕಟಿಸಲಾಗಿದೆ ಮತ್ತು ನಮಗೆ ಅದರ ಪ್ರತಿ ಸಿಕ್ಕಿದೆ" ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ

ಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಾಲಿವುಡ್ ಗಾಯಕ ಸೋನು ನಿಗಮ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಎಸ್‌ಐಟಿಯಿಂದ 9 ಪುಟಗಳ ಟಿಪ್ಪಣಿ ಪರಿಶೀಲನೆ; ಅಧಿಕಾರಿಳು ಹೇಳಿದ್ದೇನು?

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ಬೆವರಳಿಸಿದ ನೇಪಾಳಕ್ಕೆ Dale Steyn ಫಿದಾ, ಕೋಚಿಂಗ್ ಆಫರ್ ಕೊಟ್ಟ ದಕ್ಷಿಣ ಆಫ್ರಿಕಾ ಮಾಜಿ ವೇಗಿ!

Ranji Trophy: ಕೆಎಲ್ ರಾಹುಲ್- ಸ್ಮರಣ್ ರವಿಚಂದ್ರನ್ ಭರ್ಜರಿ ಜೊತೆಯಾಟ; ಮುಂಬೈ ವಿರುದ್ಧ ಗೆದ್ದು ಸೆಮಿಫೈನಲ್ ತಲುಪಿದ ಕರ್ನಾಟಕ!

SCROLL FOR NEXT