ಮಂಜುಷಾ ನಾಗ್ಪುರ್  
ದೇಶ

ಪುಣೆ ಮೇಯರ್ ಆಗಿ ಬಿಜೆಪಿಯ ಮಂಜುಷಾ ನಾಗ್ಪುರ್ ಅವಿರೋಧವಾಗಿ ಆಯ್ಕೆ

ಸಿಂಹಗಡ ಪ್ರದೇಶದ ಕಾರ್ಪೊರೇಟರ್ ಆಗಿರುವ ಇವರು ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೊದಲಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.

ಪುಣೆ: ಪುಣೆ ಮಹಾನಗರ ಪಾಲಿಕೆಯ (PMC) ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ಮಂಜುಷಾ ನಾಗ್ಪುರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆರ್​ಪಿಐ (ಎ) ನಾಯಕ ಪರಶುರಾಮ್ ವಾಡೇಕರ್ ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎನ್‌ಸಿಪಿಯ ಶೀತಲ್ ಸಾವಂತ್ ಮತ್ತು ಕಾಂಗ್ರೆಸ್ ನಾಯಕಿ ಅಶ್ವಿನಿ ಲಾಂಡ್‌ಗೆ ಅವರು ಕೊನೆಯ ಕ್ಷಣದಲ್ಲಿ ನಾಮಪತ್ರ ಹಿಂತೆಗೆದುಕೊಂಡರು. ಅದೇ ರೀತಿ, ಉಪಮೇಯರ್ ರೇಸ್‌ನಲ್ಲಿದ್ದ ಎನ್‌ಸಿಪಿ ಕಾರ್ಪೊರೇಟರ್ ದತ್ತಾತ್ರೇಯ ಬಹಿರತ್ ಮತ್ತು ಕಾಂಗ್ರೆಸ್‌ನ ಸಾಹಿಲ್ ಕೇದಾರಿ ಕೂಡ ಹಿಂದೆ ಸರಿದಿದ್ದರಿಂದ, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಆಯ್ಕೆ ಸುಗಮವಾಯಿತು.

ಸಿಂಹಗಡ ಪ್ರದೇಶದ ಕಾರ್ಪೊರೇಟರ್ ಆಗಿರುವ ಇವರು ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೊದಲಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ನಾಯಕರಾದ ಇವರು, ಬೋಪೋಡಿ ಭಾಗದಿಂದ ಬಿಜೆಪಿ ಮೈತ್ರಿಕೂಟದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಜಯಗಳಿಸಿದ್ದರು. ಒಟ್ಟು 165 ಸದಸ್ಯ ಬಲದ ಪುಣೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು 119 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣಗಳು ಒಟ್ಟಾಗಿ 30 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 15 ಮತ್ತು ಶಿವಸೇನೆ (ಯುಬಿಟಿ) ಕೇವಲ 1 ಸ್ಥಾನ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಧಿಕಾರ ಹಂಚಿಕೆ ಬಿಕ್ಕಟ್ಟು: ಸಿದ್ದು ಜೊತೆಗಿನ ಬಜೆಟ್ ಪೂರ್ವ ಭಾವಿ ಸಭೆ ಕೈಬಿಟ್ಟು, ದೆಹಲಿಗೆ ಡಿಕೆಶಿ ದಿಢೀರ್ ಪ್ರಯಾಣ!

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ: 15 ದಿನದಲ್ಲಿ ಬಿ ಖಾತೆಯಿಂದ 'ಎ'ಗೆ ವರ್ಗಾವಣೆ; ಡಿ.ಕೆ. ಶಿವಕುಮಾರ್‌

'JDS ಜೊತೆ ಮೈತ್ರಿ ನಂತರ ಕುಮಾರಸ್ವಾಮಿ ನನ್ನ ನಾಯಕನೆಂದು ಹೃದಯಪೂರ್ವಕವಾಗಿ ಒಪ್ಪಿಕೊಂಡೆ : ಆಶೀರ್ವಾದಕ್ಕಾಗಿ ಬಿಡದಿ ತೋಟದ ಮನೆಗೆ ಹೋಗಿದ್ದೆ'

T20 ವಿಶ್ವಕಪ್ 2026: ಮಂಡಿಯೂರಿದ PCB; ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೇಲಿನ ನಿರ್ಬಂಧ ತಳ್ಳಿಹಾಕಿದ ICC; ನಿಗದಿಯಂತೆ India vs Pak ಮ್ಯಾಚ್

ARAI ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ ಡಿಕೆಗೆ ಎಂಬಿ ಪಾಟೀಲ್ ಪತ್ರ!

SCROLL FOR NEXT