ಸಿಎಂ ಯೋಗಿ ಆದಿತ್ಯನಾಥ್ online desk
ದೇಶ

ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ

ಇಂದು ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ನಾವು ರಾಮಲಲ್ಲಾಗೆ ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸುತ್ತೇವೆ’ ಎಂದು ಹೇಳಿದ್ದೇವು ಮತ್ತು ಅದನ್ನೇ ಮಾಡಿದ್ದೇವೆ ಎಂದರು.

ಲಖನೌ: 'ಖಯಾಮತ್' ದಿನ ಎಂದಿಗೂ ಬರುವುದಿಲ್ಲ. ಆದ್ದರಿಂದ ಬಾಬರಿ ಮಸೀದಿಯನ್ನು ಪುನರ್ ನಿರ್ಮಾಣ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಪ್ರತಿಪಾದಿಸಿದ್ದಾರೆ.

ಇಂದು ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ನಾವು ರಾಮಲಲ್ಲಾಗೆ ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸುತ್ತೇವೆ’ ಎಂದು ಹೇಳಿದ್ದೇವು ಮತ್ತು ಅದನ್ನೇ ಮಾಡಿದ್ದೇವೆ ಎಂದು ಅಯೋಧ್ಯೆಯ ರಾಮ ಮಂದಿರ ನಿರ್ಮಾಣವನ್ನು ಉಲ್ಲೇಖಿಸಿದರು.

ಪ್ರೇಕ್ಷಕರು "ಜೈ ಶ್ರೀ ರಾಮ್" ಎಂದು ಜಪಿಸುವ ಮೂಲಕ ಉತ್ತರಿಸಿದರು. "'ಖಯಾಮತ್'(ತೀರ್ಪಿನ ದಿನ) ದಿನ ಎಂದಿಗೂ ಬರುವುದಿಲ್ಲ, ಆದ್ದರಿಂದ ಬಾಬರಿ ರಚನೆಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ. 'ಖಯಾಮತ್' ದಿನದ ಕನಸು ಕಾಣುತ್ತಿರುವವರು ಕೊಳೆಯುತ್ತಾರೆ, ಆ ದಿನ ಬರುತ್ತದೆ" ಎಂದು ಆದಿತ್ಯನಾಥ್ ಹೇಳಿದರು.

ಇಂದು ಮತ್ತೆ ಹೇಳುತ್ತಿದ್ದೇನೆ. ಕಯಾಮತ್ ದಿನ ಎಂದಿಗೂ ಬರುವುದಿಲ್ಲ. ಬಾಬ್ರಿ ಮಸೀದಿ ಪುನರ್ ನಿರ್ಮಾಣವೂ ಎಂದಿಗೂ ನಡೆಯುವುದಿಲ್ಲ. ಅದನ್ನು ಕನಸು ಕಾಣುವವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದರು.

ಈ ದೇಶದ ಕಾನೂನಿನ ಪ್ರಕಾರ ಬದುಕಿ. ಕಾನೂನು ಪಾಲಿಸಿದರೆ ಲಾಭ, ಉಲ್ಲಂಘಿಸಿದರೆ ಶಿಕ್ಷೆ ಖಚಿತ. ಕಾನೂನು ಉಲ್ಲಂಘಿಸಿ ಸ್ವರ್ಗ ಸಿಗುತ್ತದೆ ಎಂದು ಕನಸು ಕಾಣುವುದು ಭ್ರಮೆ ಎಂದು ಎಚ್ಚರಿಸಿದರು.

ರಾಮ ಮಂದಿರ ಚಳವಳಿಯನ್ನು ಭಾರತದ ಸಂಸ್ಕೃತಿ ಮತ್ತು ಸನಾತನ ಪರಂಪರೆಯೊಂದಿಗೆ ಸಂಪರ್ಕಿಸಿದ ಯೋಗಿ, ಕಳೆದ ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣ ಮಾಡಿದ್ದನ್ನು ನೆನಪಿಸಿದರು. ಕೇಸರಿ ಧ್ವಜವು ಭಾರತದ ಹೆಮ್ಮೆ ಮತ್ತು ವೈಭವಯುತ ಪರಂಪರೆಯ ಪ್ರತೀಕವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT