ರೀತು ತಾವ್ಡೆ; ಸಂಜಯ್ ಘಾಡಿ 
ದೇಶ

ಮುಂಬೈ ಮೇಯರ್‌ ಆಗಿ ರೀತು ತಾವ್ಡೆ ಅವಿರೋಧ ಆಯ್ಕೆ: 4 ದಶಕಗಳ ನಂತರ ಬಿಜೆಪಿಗೆ ಒಲಿದ ಪಟ್ಟ!

ಘಾಟ್ಕೋಪರ್ ಪಶ್ಚಿಮದಿಂದ ಮೂರು ಬಾರಿ ಕಾರ್ಪೊರೇಟರ್ ಆಗಿರುವ 53 ವರ್ಷದ ರೀತು ತಾವ್ಡೆ, ತಳಮಟ್ಟದ ರಾಜಕಾರಣ ಮತ್ತು ನಾಗರಿಕ ಆಡಳಿತ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಮುಂಬೈ ಮೇಯರ್‌ ಪಟ್ಟ ಬಿಜೆಪಿಗೆ ಒಲಿದಿದೆ.

ಮುಂಬೈ ಮೇಯರ್‌ ಚುನಾವಣೆಗೆ ಶಿವಸೇನೆ ಯುಬಿಟಿ ಬಣ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿಯ ರೀತು ತಾವ್ಡೆ ಅವಿರೋಧವಾಗಿ ಆಯ್ಕೆಯಾದರು. ದೇಶದ ಶ್ರೀಮಂತ ನಾಗರಿಕ ಸಂಸ್ಥೆಯ ಮೇಲೆ ಠಾಕ್ರೆ ಕುಟುಂಬದ 25 ವರ್ಷಗಳ ನಿರಂತರ ಪ್ರಾಬಲ್ಯ ಕೊನೆಗೊಂಡಿರುವುದು ದೇಶದ ಗಮನ ಸೆಳೆದಿದೆ.

ಘಾಟ್ಕೋಪರ್ ಪಶ್ಚಿಮದಿಂದ ಮೂರು ಬಾರಿ ಕಾರ್ಪೊರೇಟರ್ ಆಗಿರುವ 53 ವರ್ಷದ ರೀತು ತಾವ್ಡೆ, ತಳಮಟ್ಟದ ರಾಜಕಾರಣ ಮತ್ತು ನಾಗರಿಕ ಆಡಳಿತ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ರೀತು ತಾವ್ಡೆ ತಮ್ಮ ಪ್ರಾಯೋಗಿಕ ವಿಧಾನ ಮತ್ತು ಸಮುದಾಯದ ತೊಡಗಿಸಿಕೊಳ್ಳುವಿಕೆಗೆ ಹೆಸರುವಾಸಿಯಾಗಿದ್ದು, ಆಡಳಿತಾತ್ಮಕ ಸಾಮರ್ಥ್ಯವನ್ನು ಆಳವಾದ ಸ್ಥಳೀಯ ಸಂಪರ್ಕದೊಂದಿಗೆ ಸಂಯೋಜಿಸುವ ನಾಯಕಿಯಾಗಿ ಖ್ಯಾತಿ ಗಳಿಸಿದ್ದಾರೆ.

ಶಿವಸೇನೆ ನಾಯಕ ಸಂಜಯ್ ಘಾಡಿ ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು 114 ಸ್ಥಾನಗಳ ಅವಶ್ಯಕತೆ ಇತ್ತು. ಬಿಜೆಪಿ 89 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಡಿಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 29 ಸ್ಥಾನಗಳನ್ನು ಗೆದ್ದಿದೆ, ಮಹಾಯುತಿ ಮೈತ್ರಿಕೂಟ 118 ವಾರ್ಡ್​ಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!