ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

2026-27ನೇ ಸಾಲನಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯುತ್ತಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ ಮಧ್ಯಮ ವರ್ಗ ವಿಸ್ತರಣೆಯ ಪುರಾವೆಗಳಿವೆ ಎಂದು ಹೇಳಿದರು.

ನವದೆಹಲಿ: ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ ಎಂದರೆ ದೇಶದಲ್ಲಿ ಮಧ್ಯಮ ವರ್ಗದವರನ್ನು ತುಳಿಯಲಾಗುತ್ತಿದೆ ಎಂದರ್ಥವಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

2026-27ನೇ ಸಾಲನಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯುತ್ತಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ ಮಧ್ಯಮ ವರ್ಗ ವಿಸ್ತರಣೆಯ ಪುರಾವೆಗಳಿವೆ ಎಂದು ಹೇಳಿದರು.

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳದಿಂದ ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯಲಾಗುತ್ತಿದೆ ಎಂಬರ್ಥವಲ್ಲ ಎಂದರು. ಸ್ವಾವಲಂಬಿ ಭಾರತ ನಿರ್ಮಾಣ ನಿಟ್ಟಿನಲ್ಲಿ ಬಜೆಟ್ ನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಜೆಟ್ ನಲ್ಲಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ರಾಜ್ಯಸಭೆ ಸದಸ್ಯರನ್ನು ಒತ್ತಾಯಿಸಿದರು.

ಹಲವಾರು ಕಲ್ಯಾಣ ಯೋಜನೆಗಳಲ್ಲಿ ವೆಚ್ಚ ಕಡಿತ ಮಾಡಲಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಯಾವುದೇ ಯೋಜನೆಗಳಲ್ಲಿ ರಾಜ್ಯಗಳಿಗೆ ಅನುದಾನವನ್ನು ನಿರಾಕರಿಸುವುದಿಲ್ಲ ಅಥವಾ ಸ್ಥಗಿತಗೊಳಿಸುವುದಿಲ್ಲ. ಯುಪಿಎ ಆಡಳಿತದಲ್ಲಿ 94,000 ಕೋಟಿ ರೂ.ಗೆ ಹೋಲಿಸಿದರೆ ಕಳೆದ 10 ವರ್ಷಗಳಲ್ಲಿ 14 ಸಾಮಾಜಿಕ ವಲಯದ ಯೋಜನೆಗಳಲ್ಲಿ ಕೇವಲ 37,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿಲ್ಲ ಎಂದು ಹೇಳಿದರು.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ ಸಚಿವರು, ಅನುದಾನ ಹಂಚಿಕೆ ಮಾಡದೆ ಯೋಜನೆಗಳನ್ನು ಘೋಷಿಸಲಾಗಿದೆ ಎಂಬ ವಿಪಕ್ಷಗಳ ಟೀಕೆಗಳನ್ನು ತಳ್ಳಿಹಾಕಿದರು.

ಸರ್ಕಾರ ಹೆಚ್ಚು ಸಾಲ ಮಾಡದ ಕಾರಣ ಕಾಂಗ್ರೆಸ್ ಹೆಚ್ಚುತ್ತಿರುವ ಸಾಲದ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಕೇಂದ್ರದ ನಿಧಿಯು ಬಳಸಬಹುದಾದ ಉಚಿತ ನಗದು ಸಂಗ್ರಹವಲ್ಲ. ಅದು ಪ್ರಜೆಗಳು ಕಷ್ಟಪಟ್ಟು ದುಡಿದ ಹಣ. ಸರ್ಕಾರವು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ 48 ಲಕ್ಷ ಕೋಟಿ ರೂಪಾಯಿಗಳನ್ನು ಕಳುಹಿಸಿದೆ ಮತ್ತು ಸೋರಿಕೆ ತಡೆಯುವ ಮೂಲಕ 4.31 ಲಕ್ಷ ಕೋಟಿ ರೂಪಾಯಿಗಳನ್ನು ಉಳಿಸಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

ಮಾರಾಟವಾಗದೇ ಉಳಿದದ್ದಾ? or ಕುಡಿದು ಉಳಿದದ್ದಾ?: ದೆಹಲಿ ಸ್ಟೇಡಿಯಂ ಸಿಬ್ಬಂದಿ ಪಾನೀಯ ತುಂಬುತ್ತಿರುವ Video Viral

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಪ್ರಧಾನಿಯ ಹೊಸ ಕಚೇರಿ 'ಸೇವಾ ತೀರ್ಥ' ಹಾಗೂ ಕರ್ತವ್ಯ ಭವನ ನಾಳೆ ಉದ್ಘಾಟನೆ!

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

SCROLL FOR NEXT