ಲ್ಯಾಂಬೋರ್ಗಿನಿ ಕಾರು - ಬಂಧಿತ ಶಿವಂ ಮಿಶ್ರಾ 
ದೇಶ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ಬಂಧನವಾದ ಕೆಲವೇ ಗಂಟೆಗಳಲ್ಲಿ ಶಿವಂ ಮಿಶ್ರಾಗೆ ಜಾಮೀನು; Video

ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರ ಪ್ರಕಾರ, 35 ವರ್ಷದ ಶಿವಂ ಮಿಶ್ರಾ ಅವರನ್ನು "ಒಂದು ಗಂಟೆಯೊಳಗೆ" ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ವೇಗವಾಗಿ ಬಂದ ಐಷಾರಾಮಿ ಲ್ಯಾಂಬೋರ್ಘಿನಿ ಕಾರೊಂದು ಪಾದಚಾರಿಗಳ ಮೇಲೆ ಹರಿದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಕಾನ್ಪುರದ ಸ್ಥಳೀಯ ತಂಬಾಕು ಉದ್ಯಮಿ ಕೆಕೆ ಮಿಶ್ರ ಅವರ ಪುತ್ರ ಶಿವಂ ಮಿಶ್ರಾ ಅವರಿಗೆ ನಾಯಾಲಯ ಜಾಮೀನು ನೀಡಿದೆ.

10 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಘಿನಿ ರೆವೆಲ್ಟೊ ಆಟೋರಿಕ್ಷಾ, ಮೋಟಾರ್ ಸೈಕಲ್ ಡಿಕ್ಕಿ ಹೊಡೆದು ನಂತರ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಗಾಯಗೊಂಡ ಘಟನೆಯ ನಾಲ್ಕು ದಿನಗಳ ನಂತರ ಮಿಶ್ರಾ ಅವರನ್ನು ಬಂಧಿಸಲಾಗಿತ್ತು. ಬಂಧಿಸಲ್ಪಟ್ಟ ಕೆಲವೇ ಗಂಟೆಗಳಲ್ಲಿ ಶಿವಂ ಮಿಶ್ರಾಗೆ ಜಾಮೀನು ಮಂಜೂರು ಮಾಡಲಾಗಿದೆ.

18 ವರ್ಷದ ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ಅವರ ದೂರಿನ ಆಧಾರದ ಮೇಲೆ ಉದ್ಯಮಿ ಪುತ್ರನನ್ನು ಬಂಧಿಸಲಾಗಿತ್ತು.

ಶಿವಂ ಮಿಶ್ರಾ ಚಲಾಯಿಸುತ್ತಿದ್ದರು ಎನ್ನಲಾದ ಲ್ಯಾಂಬೋರ್ಘಿನಿ ರೆವೆಲ್ಟೊ ಕಾರು ಕಳೆದ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗ್ವಾಲ್ಟೋಲಿ ಪ್ರದೇಶದಲ್ಲಿ ಪಾದಚಾರಿಗಳು ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ತೌಫೀಕ್ ಸೇರಿದಂತೆ ಕನಿಷ್ಠ ಆರು ಮಂದಿ ಗಾಯಗೊಂಡಿದ್ದರು.

ಬುಧವಾರ ಕಾರಿನ ನಿಯೋಜಿತ ಚಾಲಕ ಎಂದು ಹೇಳಿಕೊಳ್ಳುವ ಮೋಹನ್ ಎಂಬ ವ್ಯಕ್ತಿ, ಅಪಘಾತದ ಸಮಯದಲ್ಲಿ ಶಿವಂ ಮಿಶ್ರಾ ಕಾರು ಚಾಲನೆ ಮಾಡಿಲ್ಲ. ನಾನು ಕಾರು ಚಲಾಯಿಸುತ್ತಿದ್ದೆ ಎಂದು ಹೇಳಿಕೊಂಡಾಗ ಪ್ರಕರಣವು ಹೊಸ ತಿರುವು ಪಡೆದುಕೊಂಡಿತು.

ಆದಾಗ್ಯೂ, ತನಿಖೆಯ ಸಮಯದಲ್ಲಿ ಸಂಗ್ರಹಿಸಲಾದ ಪುರಾವೆಗಳು ಶಿವಂ ಮಿಶ್ರಾ ಅವರೇ ಕಾರು ಚಾಲನೆ ಮಾಡುತ್ತಿದ್ದರು ಮತ್ತು ಕಾರು ಪಾದಚಾರಿಗಳು ಹಾಗೂ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಪಷ್ಟವಾಗಿ ದೃಢಪಡಿಸಿದೆ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ