ಸಾಂದರ್ಭಿಕ ಚಿತ್ರ 
ದೇಶ

ನೋಯ್ಡಾದಲ್ಲಿ MRI ಸ್ಕ್ಯಾನ್ ಮಾಡುವಾಗ 6 ವರ್ಷದ ಬಾಲಕ ಸಾವು; ಕಾರಣ ಏನು?

ಬಾಲಕನ ಸಾವಿನ ನಂತರ ಶುಕ್ರವಾರ ಡಯಾಗ್ನೋಸ್ಟಿಕ್ ಕೇಂದ್ರವನ್ನು ಸೀಲ್ ಮಾಡಲಾಗಿದೆ ಮತ್ತು ಘಟನೆಯ ತನಿಖೆಗಾಗಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ನೋಯ್ಡಾ: ಗ್ರೇಟರ್ ನೋಯ್ಡಾದ ಖಾಸಗಿ ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ಎಂಆರ್ ಐ ಮಾಡುವ ಸಮಯದಲ್ಲಿ ಆರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದ್ದು, ಆತನ ಕುಟುಂಬವು ಸಾವಿಗೆ ಡಯಾಗ್ನೋಸ್ಟಿಕ್ ನಿರ್ಲಕ್ಷ್ಯ ಮತ್ತು ಅವಧಿ ಮೀರಿದ ಔಷಧಿ ಕಾರಣ ಎಂದು ಆರೋಪಿಸಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಾಲಕನ ಸಾವಿನ ನಂತರ ಶುಕ್ರವಾರ ಡಯಾಗ್ನೋಸ್ಟಿಕ್ ಕೇಂದ್ರವನ್ನು ಸೀಲ್ ಮಾಡಲಾಗಿದೆ ಮತ್ತು ಘಟನೆಯ ತನಿಖೆಗಾಗಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಆರೋಗ್ಯ ಇಲಾಖೆಯ ಡಾ. ಚಂದನ್ ಸೋನಿ ಅವರು ಪಿಟಿಐಗೆ ತಿಳಿಸಿದ್ದಾರೆ.

"ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ವಿಚಾರಣೆ ಪೂರ್ಣಗೊಂಡ ನಂತರ ಕಾರಣ ನಿರ್ಧರಿಸಲಾಗುತ್ತದೆ" ಎಂದು ಸೋನಿ ಹೇಳಿದ್ದಾರೆ.

ಗುರುವಾರ ಡುಂಗರಪುರ ಗ್ರಾಮದ ನಿವಾಸಿ ತಮ್ಮ ಮಗುವನ್ನು ಎಂಆರ್ ಐ ಸ್ಕ್ಯಾನ್‌ಗಾಗಿ ಪೈ -3 ಪ್ರದೇಶದಲ್ಲಿರುವ ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದರು.

ಎಂಆರ್ ಐ ಪ್ರಕ್ರಿಯೆ ಆರಂಭಿಸುವ ಮೊದಲು ಬಾಲಕ ಆರೋಗ್ಯವಾಗಿಯೇ ಇದ್ದ ಕುಟುಂಬ ಸದಸ್ಯರು ಹೇಳಿದ್ದಾರೆ. ಆದರೆ ಕೇಂದ್ರದ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.

ಬಾಲಕನ ತಂದೆ ವಿಕಿ ಅವರು ಈ ಸಂಬಂಧ ಡಯಾಗ್ನೋಸ್ಟಿಕ್ ಕೇಂದ್ರದ ವಿರುದ್ಧ ಬೀಟಾ -2 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

"ವೈದ್ಯಕೀಯ ವಿಚಾರಣೆಯ ವರದಿ ಬಂದ ನಂತರ ಎಫ್‌ಐಆರ್ ದಾಖಲಿಸಲಾಗುವುದು" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ 'ಹೊಟ್ಟೆ ಉರಿ': ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕಾಂಗ್ರೆಸ್ ಆಡಳಿತವಿದ್ದಾಗ ಈಶಾನ್ಯ ಸಂಪೂರ್ಣ ನಿರ್ಲಕ್ಷ್ಯ, ಅಸ್ಸಾಂನಲ್ಲಿ ದಂಗೆಗೆ ಪ್ರಚೋದನೆ- ಪ್ರಧಾನಿ ಮೋದಿ

T20 ವಿಶ್ವಕಪ್ 2026: ಭಾರತ - ಪಾಕ್ ಪಂದ್ಯ, ಹ್ಯಾಂಡ್ ಶೇಕ್ ಇರುತ್ತಾ- ಸೂರ್ಯ ಕುಮಾರ್ ಯಾದವ್ ಮಹತ್ವದ ಹೇಳಿಕೆ!

'ಬಾಂಗ್ಲಾದೇಶದ ಹಿತಾಸಕ್ತಿ ಮೊದಲು': ಭಾರತದೊಂದಿಗಿನ ಸಂಬಂಧಗಳ ಕುರಿತು BNP ಅಧ್ಯಕ್ಷ ತಾರಿಕ್ ರೆಹಮಾನ್

ಮಹಾರಾಷ್ಟ್ರ: ಮಾಲೆಗಾಂವ್ ಉಪಮೇಯರ್ ಕೊಠಡಿಯಲ್ಲಿ ಗಾಂಧಿ, ಅಂಬೇಡ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ, ಭುಗಿಲೆದ್ದ ವಿವಾದ!

SCROLL FOR NEXT