ಹರ್ಷವರ್ಧನ್ ಸಪ್ಕಲ್ 
ದೇಶ

ಶಿವಾಜಿ ಜೊತೆಗೆ ಟಿಪ್ಪು ಹೋಲಿಕೆ: ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ; ಬಿಜೆಪಿ ಕಿಡಿ!

ಮಾಲೆಗಾಂವ್ ಮಹಾನಗರ ಪಾಲಿಕೆ ಉಪಮೇಯರ್ ಶಾನ್-ಎ-ಹಿಂದ್ ನಿಹಾಲ್ ಅಹಮದ್ ಅವರ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಇಡುವುದಕ್ಕೆ ಶಿವಸೇನೆ ಕಾರ್ಪೋರೇಟರ್ ಹಾಗೂ ಹಿಂದೂ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಜೊತೆಗೆ 18 ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಹೋಲಿಸುವುದರೊಂದಿಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಲ್ ವಿವಾದ ಹುಟ್ಟುಹಾಕಿದ್ದಾರೆ. ಅವರದು ನಾಚಿಕೆಗೇಡಿನ ಹೇಳಿಕೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದಾರೆ.

ಮಾಲೆಗಾಂವ್ ಮಹಾನಗರ ಪಾಲಿಕೆ ಉಪಮೇಯರ್ ಶಾನ್-ಎ-ಹಿಂದ್ ನಿಹಾಲ್ ಅಹಮದ್ ಅವರ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಇಡುವುದಕ್ಕೆ ಶಿವಸೇನೆ ಕಾರ್ಪೋರೇಟರ್ ಹಾಗೂ ಹಿಂದೂ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.

ಈ ವಿವಾದ ಕುರಿತು ಬುಲ್ಧಾನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಪ್ಕಲ್, ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ ಮತ್ತು ಅವರ ಸ್ವರಾಜ್ಯ ಪರಿಕಲ್ಪನೆ ಉಲ್ಲೇಖಿಸುತ್ತಾ, ಬ್ರಿಟಿಷರ ವಿರುದ್ಧ ಯುದ್ಧಕ್ಕೆ ಟಿಪ್ಪು ಸುಲ್ತಾನನ ಕರೆಯನ್ನು ಉದಾಹರಣೆಯಾಗಿ ನೀಡಿದರು. ಅಲ್ಲದೇ ಅದೇ ಮಾರ್ಗದಲ್ಲಿ ವ್ಯಕ್ತಪಡಿಸಿದ ಆದರ್ಶ ಎಂದು ಪ್ರತಿಪಾದಿಸಿದರು.

"ಆ ಅರ್ಥದಲ್ಲಿ, ಟಿಪ್ಪು ಸುಲ್ತಾನ್ ಭಾರತದ ಯೋಧ ಮತ್ತು ಭೂಮಿಪುತ್ರ. ಅವರು ಎಂದಿಗೂ ವಿಷಕಾರಿ ಸಿದ್ಧಾಂತಗಳನ್ನು ಸ್ವೀಕರಿಸಲಿಲ್ಲ. ಬದಲಿಗೆ ಶೌರ್ಯದ ಸಂಕೇತವಾಗಿ, ನಾವು ಟಿಪ್ಪು ಸುಲ್ತಾನ್ ಅನ್ನು ಶಿವಾಜಿ ಮಹಾರಾಜರಿಗೆ ಸಮಾನವಾಗಿ ಪರಿಗಣಿಸಬೇಕು ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಸಪ್ಕಾಲ್ ವಿರುದ್ಧ ಫಡ್ನವೀಸ್ ತೀವ್ರ ವಾಗ್ದಾಳಿ ನಡೆಸಿದ್ದು, ಈ ಹೋಲಿಕೆ ಖಂಡನೀಯವಾಗಿದ್ದು, ಸಪ್ಕಲ್ ತನ್ನ ಹೇಳಿಕೆ ಬಗ್ಗೆ ನಾಚಿಕೆಪಡಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T-20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್ ಭರ್ಜರಿ ಗೆಲುವು!

ಬ್ರಹ್ಮಪುತ್ರ ನದಿ ಕೆಳಗೆ ದೇಶದ ಮೊದಲ ರಸ್ತೆ-ರೈಲು ಸುರಂಗಕ್ಕೆ ಕೇಂದ್ರ ಸಂಪುಟ ಅನುಮೋದನೆ

ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್!

ಹಾಸನ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ, ಕೊಲೆ ಶಂಕೆ!

ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

SCROLL FOR NEXT