ನಿಂತಿದ್ದ ಲಾರಿಗೆ ಕಾರು ಡಿಕ್ಕಿ 
ದೇಶ

ಛತ್ತೀಸ್‌ಗಢ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಕೋಬ್ರಾ ಸಿಬ್ಬಂದಿ, ಚಾಲಕ ಸಾವು

ಮತ್ತೊಬ್ಬ ಜವಾನ್ ಅಭಿಮಾನ್ ರೈ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕರೆದೊಯ್ಯಲಾಗಿದೆ ಎಂದು ಧಮ್ತಾರಿ ಎಸ್‌ಪಿ ತಿಳಿಸಿದ್ದಾರೆ.

ರಾಯ್‌ಪುರ: ರಾಯ್‌ಪುರದಿಂದ 80 ಕಿ.ಮೀ ದೂರದಲ್ಲಿರುವ ಧಮ್ತಾರಿ ಜಿಲ್ಲೆಯ ಖಾಪ್ರಿ ಬೈಪಾಸ್ ರಸ್ತೆಯ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೋಬ್ರಾ(ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) 201 ಬೆಟಾಲಿಯನ್(ಜಗ್ದಲ್‌ಪುರ)ನ ಮೂವರು ಸಿಬ್ಬಂದಿ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ.

ವರದಿಗಳ ಪ್ರಕಾರ, ಜಗದಲ್‌ಪುರ(ಬಸ್ತರ್)ದಿಂದ ಹಿಂತಿರುಗುತ್ತಿದ್ದ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು.

ಖಾಪ್ರಿ ಬೈಪಾಸ್ ಬಳಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮತ್ತೊಬ್ಬ ಜವಾನ್ ಅಭಿಮಾನ್ ರೈ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕರೆದೊಯ್ಯಲಾಗಿದೆ ಎಂದು ಧಮ್ತಾರಿ ಎಸ್‌ಪಿ ತಿಳಿಸಿದ್ದಾರೆ.

"ಮೃತರನ್ನು ಸಬ್-ಇನ್‌ಸ್ಪೆಕ್ಟರ್ ಉಮೇದ್ ಸಿಂಗ್, ಹೆಡ್ ಕಾನ್‌ಸ್ಟೆಬಲ್ ಮುಖೇಶ್ ಕುಮಾರ್, ಕಾನ್‌ಸ್ಟೆಬಲ್ ರಾಜ್‌ಕುಮಾರ್ ಮತ್ತು ಚಾಲಕ ಹಿರಾಲಾಲ್ ನಗರ ಎಂದು ಗುರುತಿಸಲಾಗಿದೆ" ಎಂದು ಎಸ್‌ಪಿ ಹೇಳಿದ್ದಾರೆ.

ವರದಿಗಳ ಪ್ರಕಾರ, ಐದು ಜನಜಗದಲ್ಪುರ (ಬಸ್ತರ್)ದಿಂದ ಹಿಂತಿರುಗುತ್ತಿದ್ದಾಗ ಖಾಪ್ರಿ ಬೈಪಾಸ್ ಬಳಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಈ ಐವರು ಸಿಬ್ಬಂದಿ ರಜೆ ಪಡೆದು ರಾಯ್‌ಪುರಕ್ಕೆ ತೆರಳುತ್ತಿದ್ದರು.

ಡಿಕ್ಕಿಯ ಶಬ್ದದಿಂದ ಬೆಚ್ಚಿಬಿದ್ದ ಪ್ರತ್ಯಕ್ಷದರ್ಶಿಗಳು ಸ್ಥಳಕ್ಕೆ ಧಾವಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಪೊಲೀಸರು ಅವಶೇಷಗಳಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಪಿಯೂಷ್ ಗೋಯಲ್ ಅವರೇ, ಸುಳ್ಳು ಹೇಳಬೇಡಿ, ಈ ಒಪ್ಪಂದ ಸರೆಂಡರ್ ಅಷ್ಟೆ’: ರಾಹುಲ್–ವಾಣಿಜ್ಯ ಸಚಿವರ ನಡುವೆ ವಾಗ್ವಾದ-Video

ಈಶಾನ್ಯ ಭಾರತದ ಮೊಟ್ಟಮೊದಲ ವಿಮಾನ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಭೂಸ್ಪರ್ಶ: ಪ್ರಧಾನಿ ಮೋದಿ ಭೇಟಿ, ವಾಯುಪ್ರದರ್ಶನ ವೀಕ್ಷಣೆ-Video

'What kind of life is this?': ದೆಹಲಿಯ ಕಳಪೆ ಗುಣಮಟ್ಟದ ಗಾಳಿಯನ್ನು 'ಗ್ಯಾಸ್ ಚೇಂಬರ್' ಗೆ ಹೋಲಿಸಿದ ಯೋಗಿ ಆದಿತ್ಯ ನಾಥ್!

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಹೌಹಾರಿದ ಸಚಿವ, ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video

T20 World Cup 2026: ಅಫ್ಘಾನಿಸ್ತಾನ ತಂಡದ ಪ್ರದರ್ಶನ ವಿಶ್ಲೇಷಕ ಕೆಸಿ ರಾಮ ಸುಬ್ರಮಣಿಯನ್‌ಗೆ ಹೃದಯಾಘಾತ!

SCROLL FOR NEXT