ದೆಹಲಿ ವಿಶ್ವವಿದ್ಯಾಲಯ  
ದೇಶ

ದೆಹಲಿ ವಿವಿ ಕ್ಯಾಂಪಸ್‌ನಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ, ಸಾರ್ವಜನಿಕ ಸಭೆ ನಿಷೇಧ

ವಿಶ್ವವಿದ್ಯಾಲಯದ ಪ್ರಾಕ್ಟರ್ ಪ್ರೊ. ಮನೋಜ್ ಕುಮಾರ್ ಅವರು ಮಂಗಳವಾರ ಈ ಆದೇಶವನ್ನು ಹೊರಡಿಸಿದ್ದಾರೆ ಮತ್ತು ಇದು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ ಅನ್ವಯಿಸುತ್ತದೆ.

ನವದೆಹಲಿ: ಫೆಬ್ರವರಿ 17, 2026 ರಿಂದ ಒಂದು ತಿಂಗಳ ಕಾಲ ದೆಹಲಿ ವಿಶ್ವವಿದ್ಯಾಲಯದ(DU) ಆವರಣದಲ್ಲಿ ಸಾರ್ವಜನಿಕ ಸಭೆಗಳು, ಪ್ರತಿಭಟನಾ ಮೆರವಣಿಗೆಗಳು ಮತ್ತು ಇತರೆ ಯಾವುದೇ ರೀತಿಯ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.

ವಿಶ್ವವಿದ್ಯಾಲಯದ ಪ್ರಾಕ್ಟರ್ ಪ್ರೊ. ಮನೋಜ್ ಕುಮಾರ್ ಅವರು ಮಂಗಳವಾರ ಈ ಆದೇಶವನ್ನು ಹೊರಡಿಸಿದ್ದಾರೆ ಮತ್ತು ಇದು ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಗೆ ಅನ್ವಯಿಸುತ್ತದೆ.

ಕ್ಯಾಂಪಸ್‌ನಲ್ಲಿ ಅನಿಯಂತ್ರಿತ ಸಾರ್ವಜನಿಕ ಸಭೆಗಳು ಸಂಚಾರಕ್ಕೆ ಅಡ್ಡಿ ಉಂಟು ಮಾಡಬಹುದು, ಮಾನವ ಜೀವಕ್ಕೆ ಬೆದರಿಕೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಬಹುದು ಎಂಬ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರೊ. ಕುಮಾರ್ ತಮ್ಮ ನಿರ್ದೇಶನದಲ್ಲಿ ತಿಳಿಸಿದ್ದಾರೆ.

ಹಿಂದೆ, ಆಗಾಗ್ಗೆ ಪ್ರತಿಭಟನೆಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಇದು ತರುವಾಯ ಉಲ್ಬಣಗೊಂಡು ವ್ಯಾಪಕವಾಗಿ ಹರಡಿತು, ಇದರ ಪರಿಣಾಮವಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯ ಆಧಾರದ ಮೇಲೆ ಡಿಸೆಂಬರ್ 26, 2025 ರಂದು ಸಿವಿಲ್ ಲೈನ್ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಹೊರಡಿಸಿದ ಹಿಂದಿನ ಆದೇಶವನ್ನು ಸಹ ಪ್ರಾಕ್ಟರ್ ಉಲ್ಲೇಖಿಸಿದ್ದಾರೆ.

ಆ ಆದೇಶದ ಪ್ರಕಾರ, ವಿಶ್ವವಿದ್ಯಾಲಯದ ಆವರಣದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಅಥವಾ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ ಯಾವುದೇ ಸಾರ್ವಜನಿಕ ಸಭೆ, ರ್ಯಾಲಿ, ಧರಣಿ, ಪ್ರದರ್ಶನ ಅಥವಾ ಚಟುವಟಿಕೆಯನ್ನು ನಿಷೇಧಿಸಲಾಗಿದೆ. ಪ್ರಸ್ತುತ ಆದೇಶವು ಒಂದು ತಿಂಗಳ ಕಾಲ ಜಾರಿಯಲ್ಲಿರುತ್ತದೆ.

ಫೆಬ್ರವರಿ 13 ರಂದು ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆ ಮತ್ತು ಇತರರ ಮೇಲೆ ನಡೆದ ಹಲ್ಲೆಯ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC), ಉತ್ತರ ದೆಹಲಿಯ ಉಪ ಪೊಲೀಸ್ ಆಯುಕ್ತರು (DCP) ಮತ್ತು ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ನೋಟಿಸ್ ಜಾರಿ ಮಾಡಿದ ಒಂದು ದಿನದ ನಂತರ ಈ ನಿಷೇಧ ಹೇರಲಾಗಿದೆ.

NHRC ಪ್ರಕಾರ, ಪತ್ರಕರ್ತೆ, ವಿಶ್ವವಿದ್ಯಾಲಯ ಅನುದಾನ ಆಯೋಗ(UGC) ವನ್ನು ಬೆಂಬಲಿಸಿ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದಾಗ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

'ನ್ಯಾಯಯುತವಾಗಿ ನಡೆಸಿಕೊಳ್ಳಿ': ಪಾಕ್ ಮಾಜಿ ಪ್ರಧಾನಿ ಪರ ಕಪಿಲ್ ದೇವ್, ಸುನೀಲ್ ಗವಾಸ್ಕರ್ ಸೇರಿ 14 ಮಾಜಿ ನಾಯಕರು ಬ್ಯಾಟಿಂಗ್!

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ಭಾರತದ ಸಪ್ತ ಸಹೋದರಿಯರು: ಮತ್ತೆ ಪ್ರಸ್ತಾಪಿಸಿ ವಿವಾದಕ್ಕೆ ಗುರಿಯಾದ ಮೊಹಮ್ಮದ್ ಯೂನಸ್!

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

SCROLL FOR NEXT