ಬಾಲಾಪರಾಧಿ ಗೃಹ 
ದೇಶ

ಜಮ್ಮು-ಕಾಶ್ಮೀರ: ಪೊಲೀಸರ ಮೇಲೆ ಹಲ್ಲೆ; ಬಾಲಾಪರಾಧಿ ಗೃಹದಿಂದ ಮೂವರು ಪಾಕ್ ಕೈದಿಗಳು ಪರಾರಿ..! Video

ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶ್ರೀನಗರ: ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಮೂವರು ಪಾಕಿಸ್ತಾನಿ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್​​ಎಸ್​ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕೈದಿಗಳು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ತಪ್ಪಿಸಿಕೊಂಡ ಕೈದಿಗಳನ್ನು ಅಹ್ಸಾನ್ ಅನ್ವರ್ ಮತ್ತು ಮೊಹಮ್ಮದ್ ಸನಾವುಲ್ಲಾ (ಇಬ್ಬರೂ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಗಳು) ಮತ್ತು ಜಮ್ಮುವಿನ ನಿವಾಸಿ ಕರಣ್‌ಜಿತ್ ಸಿಂಗ್ ಅಲಿಯಾಸ್ ಗುಗ್ಗಾ ಎಂದು ಗುರುತಿಸಲಾಗಿದೆ.

ಘಟನೆಯ ಬಳಿಕ ಪೊಲೀಸ್ ಹಾಗೂ ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿ ಪರಿಶೀನೆ ನಡೆಸಿದ್ದು, ಪರಾರಿಯಾಗಿರುವ ಕೈದಿಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಈ ಪ್ರದೇಶದಲ್ಲಿ ತಾತ್ಕಾಲಿಕ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ ವಾಹನಗಳು ಮತ್ತು ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುತ್ತಿದೆ.

ಏತನ್ಮಧ್ಯೆ ಬಾಲಾಪರಾಧಿ ಗೃಹದ ಒಳಗೆ ಕೈದಿಗಳಿಗೆ ಶಸ್ತ್ರಾಸ್ತ್ರಗಳು ಹೇಗೆ ದೊರಕಿದವು ಎಂಬುದರ ಕುರಿತು ಪ್ರಶ್ನೆಗಳು ಮೂಡಿದ್ದು, ಈ ಕುರಿತಂತೆಯೂ ತನಿಖೆ ಆರಂಭವಾಗಿದೆ.

ಶಸ್ತ್ರಾಸ್ತ್ರಗಳನ್ನು ತಂದವರು ಯಾರು ಮತ್ತು ಯಾವ ಉದ್ದೇಶದಿಂದ ಒಳಗೆ ತಂದರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ- ಅಶ್ವಿನಿ ವೈಷ್ಣವ್

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ಭಾರತದ ಸಪ್ತ ಸಹೋದರಿಯರು: ಮತ್ತೆ ಪ್ರಸ್ತಾಪಿಸಿ ಮೊಹಮ್ಮದ್ ಯೂನಸ್ ವಿವಾದಕ್ಕೆ ಗುರಿ!

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

SCROLL FOR NEXT