ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಮಾತುಕತೆ 
ದೇಶ

ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಲೋಕಭವನದಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಅಪ್ಪುಗೆ ನೀಡುವ ಮೂಲಕ ಸಮಾಲೋಚನೆ ನಡೆಸಿದರು.

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು. ಮ್ಯಾಕ್ರನ್ ಆಗಮಿಸುತ್ತಿದ್ದಂತೆಯೇ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಕೋರಿದರು. ಬಳಿಕ ಚರ್ಚೆ ನಡೆಸಿದರು.

ಇದಕ್ಕೂ ಮುನ್ನ ಲೋಕಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಬರಮಾಡಿಕೊಂಡರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಂಬೈನ ಲೋಕಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಸ್ವಾಗತಿಸಿದ್ದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ನಡುವಿನ ಸಭೆಯು ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ. ಕಾರ್ಯತಂತ್ರದ ಸಹಕಾರ, ವ್ಯಾಪಾರ, ರಕ್ಷಣಾ ಸಹಯೋಗ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಮೇಲೆ ಮಾತುಕತೆ ನಡೆದಿರುವ ಸಾಧ್ಯತೆಯಿದೆ.

ಭಯೋತ್ಪಾದನೆಯ ವಿರುದ್ಧ ಅಂತಾರಾಷ್ಟ್ರೀಯ ಒಗ್ಗಟ್ಟನ್ನು ಪ್ರತಿಬಿಂಬಿಸುವ ಸಂಕೇತವಾಗಿ ಮ್ಯಾಕ್ರೋನ್ 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದು ಹಿಂಸಾಚಾರ, ಭಯೋತ್ಪಾದನೆ ದಾಳಿಗೊಳಗಾದ ಉಭಯ ದೇಶಗಳ ನಡುವಿನ ಸಂಪರ್ಕ ಸೇತುವೆಯಾಗಿ ಕಾಣಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ