ಎಲ್.ಕೆ. ಸುದೀಶ್ - ಪ್ರೇಮಲತಾ ವಿಜಯಕಾಂತ್ - ಎಂ.ಕೆ. ಸ್ಟಾಲಿನ್ 
ದೇಶ

ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಸೇರಿದ ಡಿಎಂಡಿಕೆ

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.

ಚೆನ್ನೈ: ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಗುರುವಾರ ಅಧಿಕೃತವಾಗಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ(ಎಸ್‌ಪಿಎ) ಸೇರ್ಪಡೆಯಾಗಿದೆ. ಇದರೊಂದಿಗೆ ವಾರಗಳ ರಾಜಕೀಯ ಊಹಾಪೋಹಗಳಿಗೆ ಅಂತ್ಯ ಹಾಡಿದೆ.

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.

ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೋಳಿ ಕರುಣಾನಿಧಿ ಸೇರಿದಂತೆ ಎರಡೂ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಹಾಜರಿದ್ದರು.

2005 ರಲ್ಲಿ ನಟ-ರಾಜಕಾರಣಿ ವಿಜಯಕಾಂತ್ ಸ್ಥಾಪಿಸಿದ ಡಿಎಂಡಿಕೆ, ಈ ಹಿಂದೆ ಯಾವತ್ತೂ ಡಿಎಂಕೆ ಜೊತೆ ಮೈತ್ರಿ ಅಥವಾ ಹೊಂದಾಣಿಕೆ ಮಾಡಿಕೊಂಡಿಲ್ಲ. ಡಿಎಂಡಿಕೆ, ಡಿಎಂಕೆ ಜೊತೆ ಕೈಜೋಡಿಸಿರುವುದು ಇದೇ ಮೊದಲು.

ಈ ಕುರಿತು "ಎಕ್ಸ್" ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸ್ಟಾಲಿನ್, ಡಿಎಂಡಿಕೆಯನ್ನು ಮೈತ್ರಿಕೂಟಕ್ಕೆ ಸ್ವಾಗತಿಸಿದ್ದಾರೆ. "ಸದ್ಭಾವನೆಯ ಬಂಧವು ತಮಿಳುನಾಡಿನ ಪ್ರಗತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!