ಎಲ್.ಕೆ. ಸುದೀಶ್ - ಪ್ರೇಮಲತಾ ವಿಜಯಕಾಂತ್ - ಎಂ.ಕೆ. ಸ್ಟಾಲಿನ್ 
ದೇಶ

ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಸೇರಿದ ಡಿಎಂಡಿಕೆ

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.

ಚೆನ್ನೈ: ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಗುರುವಾರ ಅಧಿಕೃತವಾಗಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ(ಎಸ್‌ಪಿಎ) ಸೇರ್ಪಡೆಯಾಗಿದೆ. ಇದರೊಂದಿಗೆ ವಾರಗಳ ರಾಜಕೀಯ ಊಹಾಪೋಹಗಳಿಗೆ ಅಂತ್ಯ ಹಾಡಿದೆ.

ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.

ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೋಳಿ ಕರುಣಾನಿಧಿ ಸೇರಿದಂತೆ ಎರಡೂ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಹಾಜರಿದ್ದರು.

2005 ರಲ್ಲಿ ನಟ-ರಾಜಕಾರಣಿ ವಿಜಯಕಾಂತ್ ಸ್ಥಾಪಿಸಿದ ಡಿಎಂಡಿಕೆ, ಈ ಹಿಂದೆ ಯಾವತ್ತೂ ಡಿಎಂಕೆ ಜೊತೆ ಮೈತ್ರಿ ಅಥವಾ ಹೊಂದಾಣಿಕೆ ಮಾಡಿಕೊಂಡಿಲ್ಲ. ಡಿಎಂಡಿಕೆ, ಡಿಎಂಕೆ ಜೊತೆ ಕೈಜೋಡಿಸಿರುವುದು ಇದೇ ಮೊದಲು.

ಈ ಕುರಿತು "ಎಕ್ಸ್" ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸ್ಟಾಲಿನ್, ಡಿಎಂಡಿಕೆಯನ್ನು ಮೈತ್ರಿಕೂಟಕ್ಕೆ ಸ್ವಾಗತಿಸಿದ್ದಾರೆ. "ಸದ್ಭಾವನೆಯ ಬಂಧವು ತಮಿಳುನಾಡಿನ ಪ್ರಗತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ-Video

ಎಂಗೇಜ್‌ಮೆಂಟ್‌ ಮಾಡಿಕೊಂಡ ʻಗಿಚ್ಚಿ ಗಿಲಿ ಗಿಲಿʼ ಖ್ಯಾತಿಯ ಚಿಲ್ಲರ್ ಮಂಜು; ಹುಡುಗಿ ಯಾರು?

ಆರೋಗ್ಯ ವಿಮೆ ಕೊಳ್ಳುವ ಮುನ್ನ ಗಮನಿಸಬೇಕಾದ ಅಂಶಗಳು (ಹಣಕ್ಲಾಸು)

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ. ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು

'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷರು ಹೇಳಿದ್ದು ಹೀಗೆ...

SCROLL FOR NEXT