ಬಾಲಿವುಡ್ ನಿರ್ದೇಶಕ ವಿಕ್ರಮ್ ಭಟ್ ದಂಪತಿ 
ದೇಶ

ಬಹುಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಿರ್ದೇಶಕ ವಿಕ್ರಮ್ ಭಟ್, ಪತ್ನಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್!

ವಿವಾದವು ಹೆಚ್ಚಾಗಿ ವ್ಯಾಪಾರ- ವಹಿವಾಟಿನಿಂದ ಉಂಟಾದಂತೆ ತೋರುತ್ತಿದೆ ಎಂದು ಪರಿಗಣಿಸಿದ ನ್ಯಾಯಾಲಯ, ಪ್ರಕರಣವು ಮುಂದುವರಿಯುತ್ತಿರುವಾಗ ನಿರಂತರ ಕಸ್ಟಡಿ ಬಂಧನ ಸಮರ್ಥಿಸುವುದಿಲ್ಲ ಎಂದು ಹೇಳಿದೆ.

ಚೆನ್ನೈ: 30 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಿರ್ದೇಶಕ ವಿಕ್ರಮ್ ಭಟ್ ಮತ್ತು ಅವರ ಪತ್ನಿ ಶ್ವೇತಾಂಬರಿ ಭಟ್ ಅವರಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ರಾಜಸ್ಥಾನ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡಲು ನಿರಾಕರಿಸಿತ್ತು. ಆದರೆ, ಅವರ ಬಿಡುಗಡೆಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

ವಿವಾದವು ಹೆಚ್ಚಾಗಿ ವ್ಯಾಪಾರ- ವಹಿವಾಟಿನಿಂದ ಉಂಟಾದಂತೆ ತೋರುತ್ತಿದೆ ಎಂದು ಪರಿಗಣಿಸಿದ ನ್ಯಾಯಾಲಯ, ಪ್ರಕರಣವು ಮುಂದುವರಿಯುತ್ತಿರುವಾಗ ನಿರಂತರ ಕಸ್ಟಡಿ ಬಂಧನ ಸಮರ್ಥಿಸುವುದಿಲ್ಲ ಎಂದು ಹೇಳಿದೆ.

ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ದಂಪತಿಗಳ ಮೇಲ್ಮನವಿಯನ್ನು ಅಂಗೀಕರಿಸಿತು. ಆರೋಪಗಳು ಗಂಭೀರವಾಗಿದ್ದರೂ, ಈ ಹಂತದಲ್ಲಿ ದೀರ್ಘಕಾಲದ ಸೆರೆವಾಸವನ್ನು ಸಮರ್ಥಿಸುವ ಅಪರಾಧಗಳಿಗಿಂತ ಹೆಚ್ಚಾಗಿ ಹಣಕಾಸಿಗೆ ಸಂಬಂಧಿಸಿದಂತೆ ನಡೆದಿರುವುದಂತೆ ತೋರುತ್ತಿದೆ ಎಂದು ನ್ಯಾಯಾಲಯ ಹೇಳಿದೆ.

ಜಾಮೀನು ಪ್ರಕರಣದ ಅರ್ಹತೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲ್ಲ ಎಂದಿದ್ದು, ತನಿಖೆ ಮತ್ತು ವಿಚಾರಣೆಯು ಕಾನೂನಿನ ಪ್ರಕಾರ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್