ಕವಿತಾ 
ದೇಶ

ಮೇ ತಿಂಗಳಲ್ಲಿ 'ತೆಲಂಗಾಣ' ಪಾರ್ಟಿ ಉದಯ; ನಮ್ಮ ಪಕ್ಷ ಸ್ಥಾಪಿಸಿದ ನಂತರ BJP ಅಸ್ತಿತ್ವದಲ್ಲೇ ಇರೋಲ್ಲ: ಕವಿತಾ

ವೈ.ಎಸ್ ಶರ್ಮಿಳಾ ವಿಫಲ ನಾಯಕಿಯಲ್ಲ. ಈಗ ಅವರು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷರು. ರಾಜಕೀಯ ಪಕ್ಷಗಳನ್ನು ಪ್ರಾರಂಭಿಸಿದ ನಂತರ ವಿಫಲರಾದ ಪುರುಷ ನಾಯಕರ ಬಗ್ಗೆ ನಾವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದರು.

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮೇ ತಿಂಗಳಲ್ಲಿ ಹೊಸ ಪಕ್ಷ ಉದ್ಘಾಟನೆ ನಡೆಯಲಿದೆ ಎಂದು ಹೇಳಿದ ಕವಿತಾ, ಪಕ್ಷದ ಹೆಸರಿನಲ್ಲಿ 'ತೆಲಂಗಾಣ' ಕೂಡ ಇರುತ್ತದೆ ಎಂದು ಹೇಳಿದರು.

"ತೆಲಂಗಾಣ ನಮ್ಮ 'ಮಾತೃ ಮಂಡಳಿ'. ಸಾಮಾಜಿಕ ತೆಲಂಗಾಣ (ತೆಲಂಗಾಣ ಮತ್ತು ಸಾಮಾಜಿಕ ನ್ಯಾಯ) ನಮ್ಮ ಗುರಿ. ಜನರ ಆಕಾಂಕ್ಷೆಗಳಿಗೆ ಅನುಗುಣವಾಗಿ ನಾವು ಪಕ್ಷವನ್ನು ನಡೆಸುತ್ತೇವೆ" ಎಂದು ಅವರು ಹೇಳಿದರು, ರಾಜ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ, ಸಿದ್ದಿಪೇಟೆ ಕ್ಷೇತ್ರದಿಂದ ಸ್ಪರ್ಧಿಸುವುದು ಮತ್ತು ಎರಡನೇ ಆಯ್ಕೆಯಾದ ಬೋಧನ್‌ನಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಮ್ಮ ಪಕ್ಷವು ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿಕೊಂಡ ಅವರು, "ನಾವು ಪಕ್ಷವನ್ನು ಸ್ಥಾಪಿಸಿದ ನಂತರ, ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವದಲ್ಲಿರುವುದಿಲ್ಲ.

ಆಡಳಿತಾರೂಢ ಕಾಂಗ್ರೆಸ್ ಜೊತೆಗೆ ಬಿಆರ್‌ಎಸ್ ಮತ್ತು ಬಿಜೆಪಿ ಜನವಿರೋಧಿ ನೀತಿಗಳು ಮತ್ತು ದುಷ್ಕೃತ್ಯಗಳ ಬಗ್ಗೆ ನಾವು ನಿರಂತರವಾಗಿ ಪ್ರಶ್ನಿಸುತ್ತೇವೆ ಮತ್ತು ಆಪಕ್ಷಗಳನ್ನು ಮೂಲೆಗುಂಪು ಮಾಡುತ್ತೇವೆ ಎಂದಿದ್ದಾರೆ.

ಮುಂಬರುವ MPTC, ZPTC ಮತ್ತು GHMC ಚುನಾವಣೆಗಳಲ್ಲಿಯೂ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಕವಿತಾ ಬಹಿರಂಗಪಡಿಸಿದ್ದಾರೆ. "ZPTC ಮತ್ತು MPTC ಚುನಾವಣೆಗಳಲ್ಲಿ, ನಾವು ಬೇರೆ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತೇವೆ. ನಮಗೆ ಚುನಾವಣಾ ಚಿಹ್ನೆ ನೀಡಿದರೆ, ನಾವು GHMC ಚುನಾವಣೆಯಲ್ಲಿ ನಮ್ಮದೇ ಚಿಹ್ನೆಯ ಮೇಲೆ ಸ್ಪರ್ಧಿಸುತ್ತೇವೆ" ಎಂದು ಹೇಳಿದರು.

ತಮ್ಮ ಪಕ್ಷವು ಯುವಕರಿಗೆ ಆದ್ಯತೆ ನೀಡುತ್ತದೆ ಎಂದು ಹೇಳಿದ ಅವರು, ಹಲವಾರು BRS ನಾಯಕರು ತಮ್ಮ ಪಕ್ಷಕ್ಕೆ ಸೇರಲು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡರು. ವೈಎಸ್ ಶರ್ಮಿಳಾ ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕವಿತಾ, ಶರ್ಮಿಳಾ ವಿಫಲ ನಾಯಕಿಯಲ್ಲ. ಈಗ ಅವರು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷರು. ರಾಜಕೀಯ ಪಕ್ಷಗಳನ್ನು ಪ್ರಾರಂಭಿಸಿದ ನಂತರ ವಿಫಲರಾದ ಪುರುಷ ನಾಯಕರ ಬಗ್ಗೆ ನಾವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel