ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿ ರದ್ದತಿ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜೆ

"ಪ್ರತಿವಾದಿ(ಮಹಾರಾಷ್ಟ್ರ ಸರ್ಕಾರ) ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಜನಾಂಗೀಯ ತಾರತಮ್ಯ ಮಾಡುತ್ತಿದೆ. ಇದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮುಂಬೈ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಲಾಗಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಈ ಕ್ರಮವನ್ನು "ಜನಾಂಗೀಯ ತಾರತಮ್ಯ" ಎಂದು ಟೀಕಿಸಲಾಗಿದೆ.

ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ಮುಸ್ಲಿಂ ಮೀಸಲಾತಿ ರದ್ದತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಇಲಾಖೆಯು ಫೆಬ್ರವರಿ 17 ರಂದು ಹೊರಡಿಸಿದ ಸರ್ಕಾರದ ಅಧಿಸೂಚನೆ ಸಂವಿಧಾನ ಬಾಹಿರ ಮತ್ತು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

"ಪ್ರತಿವಾದಿ(ಮಹಾರಾಷ್ಟ್ರ ಸರ್ಕಾರ) ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಜನಾಂಗೀಯ ತಾರತಮ್ಯ ಮಾಡುತ್ತಿದೆ. ಇದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅರ್ಜಿಯನ್ನು ಹೈಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಫೆಬ್ರವರಿ 17 ರಂದು ಸರ್ಕಾರ ಹೊರಡಿಸಿದ ಅಧಿಸೂಚನೆಯನ್ನು ರದ್ದುಗೊಳಿಸಲು ಮತ್ತು ಮಧ್ಯಂತರ ಆದೇಶದ ಮೂಲಕ ಅರ್ಜಿಯ ವಿಚಾರಣೆಯವರೆಗೆ ತಡೆ ನೀಡುವಂತೆ ಹೈಕೋರ್ಟ್ ಗೆ ಕೋರಲಾಗಿದೆ ಎಂದು ಅರ್ಜಿದಾರರ ಪರ ವಕೀಲ ನಿತಿನ್ ಸತ್ಪುಟೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಭಾರತದ ವಿರುದ್ಧ ಸೋತಿದ್ದು ಅವಮಾನ ಅನಿಸಲಿಲ್ಲ: ಆದರೆ ಲಂಕಾ ಪೊಲೀಸರ ಬಗ್ಗೆ ಬೇಸರ ವ್ಯಕ್ತಪಡಿಸಿದ Pak ಬೌಲರ್!

'ಟಿವಿ ಸೌಂಡ್ ಕಡಿಮೆ ಮಾಡು' ಎಂದಿದ್ದಕ್ಕೇ ಗಂಡನನ್ನೇ ಇರಿದು ಕೊಂದ ಪತ್ನಿ 'ಕ್ರಾಂತಿ'!

ಕುಪ್ವಾರಾ: ಕದನ ವಿರಾಮ ಉಲ್ಲಂಘಿಸಿ ಪಾಕ್ ಗುಂಡಿನ ದಾಳಿ; ಎಲ್‌ಒಸಿಯಲ್ಲಿ ನಿಜಕ್ಕೂ ಆಗಿದ್ದೇನು?

ವಾಹನ ಸವಾರರ ಗಮನಕ್ಕೆ; ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ!

SCROLL FOR NEXT