ದೇಶ

ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರ್ಪಡೆ

ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ ವಾಜಪೇಯಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೋರಾ ಅಸ್ಸಾಂ ಬಿಜೆಪಿ ರಾಜ್ಯಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ಕಾರ್ಯಕರ್ತ ಸಂಜು ಬೋರಾ ಕೂಡ ಈ ಸಂದರ್ಭದಲ್ಲೇ ಬಿಜೆಪಿ ಸೇರಿದ್ದಾರೆ.

ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಇದಾದ ಬಳಿಕ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯ ಬೇಕು ಎಂದು ಕೇಳಿದ ಬೋರಾ ಮರುದಿನವೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಿವಾಸಕ್ಕೆ ತೆರಳಿ ಫೆಬ್ರವರಿ 22ರಂದು ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದರು.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ಬಿಜೆಪಿ ಸೇರಿರುವುದು ತೀವ್ರ ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಈ ವೇಳೆ ಬೋರಾ ವಿರುದ್ಧ ಇರುವ ಕೋಲ್ ಟ್ರೇಡ್ (ಕಲ್ಲಿದ್ದಲು ವ್ಯಾಪಾರ) ಹಗರಣದ ಆರೋಪವೂ ಮುನ್ನೆಲೆಗೆ ಬರುತ್ತಿದೆ. 2025ರ ಏಪ್ರಿಲ್‌ನಲ್ಲಿ ಆಡಿಯೋ ಕ್ಲಿಪ್ ಒಂದು ಹರಿದಾಡಿತ್ತು. ಅದರಲ್ಲಿ ಬೋರಾ ಅವರ ಆಪ್ತನೆನ್ನಲಾದ ವ್ಯಕ್ತಿ ಕಲ್ಲಿದ್ದಲು ವ್ಯಾಪಾರಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವುದು ತಿಳಿದುಬಂದಿತ್ತು. ಈ ಆರೋಪಗಳನ್ನು ಭೂಪೇನ್ ಬೋರಾ ಸಂಪೂರ್ಣವಾಗಿ ನಿರಾಕರಿಸಿದ್ದು ಅವರೇ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದಲ್ಲಿ ದಾಳಿಗೆ ಸಂಚು: ಪಾಕ್‌ನ ISI ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ

ಮಂಡ್ಯ: ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡಗೆ ಗಂಭೀರ ಗಾಯ; ಕಾರು ಸಂಪೂರ್ಣ ನಜ್ಜು-ಗುಜ್ಜು

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!

ರಂಜಾನ್ ನಡುವೆಯೇ ಅಫ್ಘಾನಿಸ್ತಾನದ ಮೇಲೆ ಪಾಕ್ ದಾಳಿ: ಹಲವು ನಾಗರಿಕರ ಸಾವು

ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ, ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿ: ವಿಸಿಗಳಿಗೆ CM ಸಲಹೆ

SCROLL FOR NEXT