ಪತನಗೊಂಡ ಏರ್ ಆಂಬ್ಯುಲೆನ್ಸ್  
ದೇಶ

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಸೋಮವಾರ ಸಂಜೆ ಚಾತ್ರಾ ಜಿಲ್ಲೆಯ ಸಿಮರಿಯಾ ಬ್ಲಾಕ್‌ನ ಕಸಾರಿಯಾ ಪಂಚಾಯತ್ ಪ್ರದೇಶದಲ್ಲಿ ಪತನಗೊಂಡು ಏಳು ಮಂದಿ ಸಾವಿಗೀಡಾಗಿದ್ದಾರೆ.

ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಈ ವಿಮಾನವು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ Beechcraft King Air BE9L ಆಗಿದ್ದು, “ರಾಂಚಿ–ದೆಹಲಿ” ಮಾರ್ಗದಲ್ಲಿ ವೈದ್ಯಕೀಯ ತುರ್ತು ಸ್ಥಳಾಂತರ (ಏರ್ ಆಂಬುಲೆನ್ಸ್) ಸೇವೆಗೆ ಬಳಸಲಾಗುತ್ತಿತ್ತು.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮಾಹಿತಿ ಪ್ರಕಾರ, ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಸದಸ್ಯರನ್ನು ಒಳಗೊಂಡಂತೆ ಒಟ್ಟು ಏಳು ಮಂದಿ ಇದ್ದರು. ವಿಮಾನವು ನಿನ್ನೆ ಸಾಯಂಕಾಲ 7:11ಕ್ಕೆ ರಾಂಚಿಯಿಂದ ಹೊರಟಿತ್ತು.

ಕೋಲ್ಕತ್ತಾ ನಿಯಂತ್ರಣದೊಂದಿಗೆ ಸಂಪರ್ಕ ಸಾಧಿಸಿದ ನಂತರ, ಹವಾಮಾನ ಕಾರಣದಿಂದ ಮಾರ್ಗ ಬದಲಾವಣೆ ಮಾಡಲು ಪೈಲಟ್ ಮನವಿ ಮಾಡಿಕೊಂಡಿದ್ದರು. ಸಂಜೆ 7:34ಕ್ಕೆ ಕೋಲ್ಕತ್ತಾ ನಿಯಂತ್ರಣದೊಂದಿಗೆ ಸಂವಹನ ಮತ್ತು ರಾಡಾರ್ ಸಂಪರ್ಕ ಕಳೆದುಕೊಂಡಿತು. ವಿಮಾನದ ಕೊನೆಯ ತಿಳಿದಿರುವ ಸ್ಥಳವು ವಾರಾಣಸಿಯಿಂದ ದಕ್ಷಿಣ-ಪೂರ್ವ ದಿಕ್ಕಿನಲ್ಲಿ ಸುಮಾರು 100 ನಾಟಿಕಲ್ ಮೈಲುಗಳ ದೂರದಲ್ಲಿತ್ತು ಎಂದು ಡಿಜಿಸಿಎ ತಿಳಿಸಿದೆ.


ವಿಮಾನದಲ್ಲಿ 41 ವರ್ಷದ ರೋಗಿ ಸಂಜಯ್ ಕುಮಾರ್ ಇದ್ದರು. ಅವರೊಂದಿಗೆ ಇಬ್ಬರು ಪೈಲಟ್‌ಗಳು — ವಿವೇಕ್ ವಿಕಾಶ್ ಭಗತ್ ಮತ್ತು ಸವರಾಜ್‌ದೀಪ್ ಸಿಂಗ್ — ವೈದ್ಯ ವಿಕಾಶ್ ಕುಮಾರ್ ಗುಪ್ತಾ, ಪ್ಯಾರಾಮೆಡಿಕ್ ಸಚಿನ್ ಕುಮಾರ್ ಮಿಶ್ರಾ ಹಾಗೂ ಸಹಾಯಕರು ಅರ್ಚನಾ ದೇವಿ ಮತ್ತು ಧುರು ಕುಮಾರ್ ಪ್ರಯಾಣಿಸುತ್ತಿದ್ದರು.

ಘಟನೆ ವರದಿಯಾದ ತಕ್ಷಣ ಸ್ಥಳೀಯ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳು ಅಪಘಾತ ಸ್ಥಳಕ್ಕೆ ಧಾವಿಸಿದರು.

ವಿಮಾನವು ಏರ್ ಆಂಬುಲೆನ್ಸ್ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಂಚಿಯಿಂದ ದೆಹಲಿಗೆ ಚಿಕಿತ್ಸೆಗಾಗಿ ರೋಗಿಯನ್ನು ಕರೆದೊಯ್ಯುತ್ತಿತ್ತು. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ವಿಮಾನಯಾನ ಅಧಿಕಾರಿಗಳು ಶೀಘ್ರದಲ್ಲೇ ಸವಿಸ್ತಾರ ತನಿಖೆ ಪ್ರಾರಂಭಿಸುವ ನಿರೀಕ್ಷೆಯಿದ್ದು, ಅದರಡಿ ವಿಮಾನ ಡೇಟಾ, ತಾಂತ್ರಿಕ ದಾಖಲೆಗಳು ಹಾಗೂ ಹೊರಟ ಸಮಯದ ಹವಾಮಾನ ಪರಿಸ್ಥಿತಿಗಳನ್ನು ಪರಿಶೀಲಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ, DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!

ರಂಜಾನ್, ಹೋಳಿ ಹಬ್ಬ: ಶಾಂತಿ ಕದಡಿದರೆ ಕಠಿಣ ಕ್ರಮ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಖಡಕ್ ಸೂಚನೆ

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಗಳ ಭರ್ಜರಿ ಜಯ

SCROLL FOR NEXT