ನರೇಂದ್ರ ಮೋದಿ-ಮಮತಾ ಬ್ಯಾನರ್ಜಿ 
ದೇಶ

ಬಿಜೆಪಿ-ಸಿಪಿಐ(ಎಂ) ಹೊಂದಾಣಿಕೆಯಿಂದ ಕೇರಳಕ್ಕೆ ಹೊಸ ಹೆಸರು; ಕೇಂದ್ರ ಬಂಗಾಳವನ್ನು ನಿರ್ಲಕ್ಷಿಸಿದೆ: ಮಮತಾ

ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾವಣೆ ಮಾಡುವ ಕೇರಳ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ಕೋಲ್ಕತ್ತಾ: ಬಿಜೆಪಿ ಮತ್ತು ಸಿಪಿಐ(ಎಂ) ನಡುವಿನ "ಹೊಂದಾಣಿಕೆ" ಕೇರಳಕ್ಕೆ ಹೊಸ ಹೆಸರು ಪಡೆಯಲು ಸಹಾಯ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾವಣೆ ಮಾಡುವ ಕೇರಳ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳವನ್ನು 'ಬಂಗಾಳ' ಎಂದು ಹೆಸರಿಸುವ ತನ್ನ ಸರ್ಕಾರದ ಪ್ರಸ್ತಾಪಗಳನ್ನು ಕೇಂದ್ರ ಪದೇ ಪದೇ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಅಭಿವೃದ್ಧಿಗಾಗಿ ಕೇರಳದ ಜನರನ್ನು ಅಭಿನಂದಿಸಿದ ಮಮತಾ ಬ್ಯಾನರ್ಜಿ, ಆಯಾ ರಾಜ್ಯ ಸರ್ಕಾರಗಳು ಅಂತಹ ಪ್ರಸ್ತಾಪಗಳನ್ನು ಅನುಮೋದಿಸಿದ ನಂತರ ಹಲವಾರು ರಾಜ್ಯಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂದು ಹೇಳಿದರು.

"ಆದಾಗ್ಯೂ, ಪಶ್ಚಿಮ ಬಂಗಾಳದಲ್ಲಿ ಆ ರೀತಿ ಆಗಿಲ್ಲ". ಕೇಂದ್ರ ಸರ್ಕಾರ "ಬಂಗಾಳಿ ವಿರೋಧಿ" ಆಗಿರುವುದರಿಂದ ತಮ್ಮ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸುತ್ತಿಲ್ಲ ಎಂದು ಆರೋಪಿಸಿದರು.

ದಕ್ಷಿಣ ರಾಜ್ಯದ ಆಡಳಿತ ಪಕ್ಷವಾದಸಿಪಿಐ(ಎಂ) ಮತ್ತು ಬಿಜೆಪಿ ನಡುವಿನ ಹೊಂದಾಣಿಕೆ ಕೇರಳಕ್ಕೆ ಹೊಸ ಹೆಸರನ್ನು ಪಡೆಯಲು ಸಹಾಯ ಮಾಡಿದೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಯಾವಾಗಲೂ ಕಡೆಗಣಿಸಲಾಗುತ್ತಿದೆ. ಆದರೆ ಮುಂದೊಂದು ದಿನ, ನೀವು(ಬಿಜೆಪಿ) ಅಧಿಕಾರದಲ್ಲಿ ಇರುವುದಿಲ್ಲ. ಆಗ ನಾವು ಹೆಸರನ್ನು ಬದಲಾಯಿಸುತ್ತೇವೆ" ಎಂದು ಮಮತಾ ಬ್ಯಾನರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಮರುನಾಮಕರಣ ಮಾಡುವಂತೆ ಕೋರಿ ನಮ್ಮ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ಎರಡು ಬಾರಿ ನಿರ್ಣಯಗಳನ್ನು ಅಂಗೀಕರಿಸಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಬೆಂಗಳೂರಿನಲ್ಲಿ ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

News wrap 24-02-2026 | 2.7 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Shivamogga: 16 ವರ್ಷದ ಬಾಲಕನ ಕೊಲೆ; ರಣ್ವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ

SCROLL FOR NEXT