ಅಪಘಾತದ ನಂತರ ದೃಶ್ಯ 
ದೇಶ

ಲಖ್ನೋ: ಡಬಲ್ ಡೆಕ್ಕರ್ ಬಸ್ ಉರುಳಿ 5 ಮಂದಿ ಸಾವು, 45 ಮಂದಿಗೆ ಗಾಯ-Video

ಅಧಿಕಾರಿಗಳ ಪ್ರಕಾರ, ಗಾಯಗೊಂಡ 28 ಪ್ರಯಾಣಿಕರನ್ನು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (SGPGI)ಯ ಏಪೆಕ್ಸ್ ಟ್ರಾಮಾ ಸೆಂಟರ್‌ಗೆ ರವಾನಿಸಲಾಗಿದೆ.

ಲಖ್ನೋ: ಲಖ್ನೋದಲ್ಲಿನ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಬಸ್ ಉರುಳಿ ಬಿದ್ದ ಐವರು ಮೃತಪಟ್ಟಿದ್ದು, ಕನಿಷ್ಠ 45 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸ್ಥಳದಲ್ಲಿ ಗೊಂದಲ ಉಂಟುಮಾಡಿ ಭಾರೀ ರಕ್ಷಣಾ ಕಾರ್ಯಾಚರಣೆಗೆ ಕಾರಣವಾಯಿತು.

ಅಧಿಕಾರಿಗಳ ಪ್ರಕಾರ, ಗಾಯಗೊಂಡ 28 ಪ್ರಯಾಣಿಕರನ್ನು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (SGPGI)ಯ ಏಪೆಕ್ಸ್ ಟ್ರಾಮಾ ಸೆಂಟರ್‌ಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ ಏಳು ಮಕ್ಕಳು, 12 ಪುರುಷರು ಮತ್ತು ಒಂಬತ್ತು ಮಹಿಳೆಯರು ಸೇರಿದ್ದಾರೆ. ಉಳಿದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮೃತರನ್ನು ಬಿರೇಂದ್ರ (30), ಅಂಜಲಿ (8), ಪ್ರಿಯಾಂಶು (15), ಆರು ವರ್ಷದ ಮಗು ಮತ್ತು 30 ವರ್ಷದ ಒಬ್ಬ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದಾಗ ಬಸ್ ಪಂಜಾಬ್‌ನ ಲುಧಿಯಾನಾದಿಂದ ಬಿಹಾರದ ಮೊತಿಹಾರಿಗೆ ತೆರಳುತ್ತಿತ್ತು. ಸಾಕ್ಷಿದಾರರ ಪ್ರಕಾರ, ವಾಹನವು ಗಂಟೆಗೆ 80 ಕಿಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಾಗುತ್ತಿತ್ತು. ಘಟನೆ ನಂತರ ಚಾಲಕ ಮತ್ತು ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದು, ಪ್ರಯಾಣಿಕರು ಉರುಳಿದ ಬಸ್ ಒಳಗೆ ಸಿಲುಕಿಕೊಂಡಿದ್ದರು.

ಅಪಘಾತದ ನಂತರ ಹೊರಬಂದ ವಿಡಿಯೋದಲ್ಲಿ ಕ್ರೇನ್ ಸಹಾಯದಿಂದ ಬಸ್ ನ್ನು ನೇರವಾಗಿ ಎತ್ತುತ್ತಿರುವುದು ಕಾಣಿಸುತ್ತದೆ. ಬಸ್ ನ್ನು ಸರಿಪಡಿಸುವ ವೇಳೆ ಕಿಟಕಿಗಳಿಂದ ಮೃತದೇಹಗಳು ರಸ್ತೆಗೆ ಬಿದ್ದಿದ್ದು, ಅಪಘಾತ ಸ್ಥಳದಲ್ಲಿ ರಕ್ತ ಹರಡಿರುವುದು ಕಂಡುಬಂದಿತು. ಬಸ್ ನ್ನು ನೇರವಾಗಿ ನಿಲ್ಲಿಸಿದ ನಂತರವೂ ಕೆಲ ಗಾಯಾಳುಗಳು ಮತ್ತು ಮೃತರು ಕಿಟಕಿಗಳಿಗೆ ತೂಗುತಿರುವುದು ಕಂಡುಬಂದಿದ್ದು, ಬದುಕುಳಿದವರು ಸಹಾಯಕ್ಕಾಗಿ ಅಳುತ್ತಿದ್ದರು.

ಕೆಲವರು ಪ್ರಯಾಣಿಕರು ಅಪಘಾತಕ್ಕೂ ಸುಮಾರು ಅರ್ಧ ಗಂಟೆ ಮೊದಲು ಚಾಲಕ ರಸ್ತೆ ಬದಿಯ ಧಾಬಾದಲ್ಲಿ ಮದ್ಯಪಾನ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ನಂತರ ಕ್ರೇನ್ ಸಹಾಯದಿಂದ ಬಸ್ ನ್ನು ಸಮೀಪದ ಟೋಲ್ ಪ್ಲಾಜಾಗೆ ಎಳೆಯಲಾಯಿತು. ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಲಖ್ನೋದಲ್ಲಿನ ಲೋಕಬಂಧು ಆಸ್ಪತ್ರೆಯ ವೈದ್ಯರನ್ನು ಕರೆಸಲಾಗಿತ್ತು.

ಬಸ್ ಚಾಲಕನಾದ ಸೋಂಪಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವನನ್ನು ಪತ್ತೆಹಚ್ಚಿ ಬಂಧಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ಸ್ಥಳೀಯರು ದೊಡ್ಡ ಸಂಖ್ಯೆಯಲ್ಲಿ ಸೇರಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು. ದುರ್ಘಟನೆಯ ನಂತರ ರಕ್ತದಿಂದ ಮಸುಕಾದ ರಸ್ತೆಯನ್ನು ಸ್ವಚ್ಛಗೊಳಿಸಲು ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ಮುಂದಿನ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

CM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ, DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!

ರಂಜಾನ್, ಹೋಳಿ ಹಬ್ಬ: ಶಾಂತಿ ಕದಡಿದರೆ ಕಠಿಣ ಕ್ರಮ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಖಡಕ್ ಸೂಚನೆ

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

SCROLL FOR NEXT