ಶಶಿ ತರೂರ್ 
ದೇಶ

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

‘ಕೇರಲೈಟ್’ ಮತ್ತು ‘ಕೇರಳನ್’ ಪದಗಳಿಗೆ ಈಗ ಏನಾಗುತ್ತದೆ? ‘ಕೇರಳಮೈಟ್’ ಎಂದು ಕರೆಯಲಾಗುತ್ತದೆಯೇ? ‘ಕೇರಳಮೈಟ್’ ಒಂದು ಸೂಕ್ಷ್ಮಜೀವಿಯಂತೆ ಧ್ವನಿಸುತ್ತದೆ. ಅಂತೆಯೇ, ‘ಕೇರಳಮೈನ್’ ಪದವು ಅಪರೂಪದ ಭೂಮಿಯ ಖನಿಜದಂತೆ ಧ್ವನಿಸುತ್ತದೆ…!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವ ಕೇರಳ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದೆ. ಇನ್ನುಮುಂದೆ, ಕೇರಳವು ಕೇರಳಂ ಆಗಲಿದೆ.

ಕೇರಳ ಹೆಸರನ್ನು ಕೇರಳಂ ಎಂದು ಮರುನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಇಡೀ ರಾಜ್ಯ ಸಂಭ್ರಮಿಸುತ್ತಿದೆ. ಆದರೆ ತಿರುವನಂತಪುರಂ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಮಾತ್ರ ಹೆಸರು ಬದಲಾವಣೆ ನಿರ್ಧಾರವನ್ನು ವಿರೋಧಿಸಿದ್ದಾರೆ. ಈ ಹೆಸರು ಬದಲಾವಣೆಗೆ ಪ್ರತಿಕ್ರಿಯಿಸಿದ ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್, “ಇಂಗ್ಲಿಷ್ ಮಾತನಾಡುವವರು ಈಗ ರಾಜ್ಯದ ನಿವಾಸಿಗಳನ್ನು ಏನೆಂದು ಕರೆಯುತ್ತಾರೆ?

‘ಕೇರಲೈಟ್’ ಮತ್ತು ‘ಕೇರಳನ್’ ಪದಗಳಿಗೆ ಈಗ ಏನಾಗುತ್ತದೆ? ‘ಕೇರಳಮೈಟ್’ ಎಂದು ಕರೆಯಲಾಗುತ್ತದೆಯೇ? ‘ಕೇರಳಮೈಟ್’ ಒಂದು ಸೂಕ್ಷ್ಮಜೀವಿಯಂತೆ ಧ್ವನಿಸುತ್ತದೆ. ಅಂತೆಯೇ, ‘ಕೇರಳಮೈನ್’ ಪದವು ಅಪರೂಪದ ಭೂಮಿಯ ಖನಿಜದಂತೆ ಧ್ವನಿಸುತ್ತದೆ…! ಎಂದಿದ್ದಾರೆ. ಒಳ್ಳೆಯದಾಗಲಿ, ಕೇರಳ ಮುಖ್ಯಮಂತ್ರಿಗಳು ಚುನಾವಣೆಗಾಗಿ ಹೊಸ ಪದಗಳ ಸ್ಪರ್ಧೆಯನ್ನು ಪ್ರಾರಂಭಿಸಲು ಬಯಸಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಕೇರಳದ ಹೆಸರನ್ನು ಕೇರಳಂ ಎಂದು ಮರುನಾಮಕರಣ ಮಾಡುವ ಬದಲು, ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಅನುದಾನ ಮತ್ತು ಹೆಚ್ಚಿನ ಯೋಜನೆಗಳನ್ನು ಘೋಷಿಸಿದ್ದರೆ ಉತ್ತಮವಾಗಿತ್ತು. ಕೇಂದ್ರ ಸರ್ಕಾರ ನಮಗೆ ಏಮ್ಸ್‌ ಸೇರಿದಂತೆ ಯಾವುದೇ ಹೊಸ ಸಂಸ್ಥೆಗಳನ್ನು ನೀಡಿಲ್ಲ. ಅವರು ನಮಗೆ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಆದರೆ ರಾಜ್ಯದ ಹೆಸರು ಬದಲಾವಣೆಯನ್ನೇ ಬಹುದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಶಶಿ ತರೂರ್‌ ಅಸಮಾಧಾನ ಹೊರಹಾಕಿದ್ದಾರೆ.

ಕೇರಳದ ಹೆಸರನ್ನು ಕೇರಳಂ ಎಂದು ಮರುನಾಮಕರಣ ಮಾಡಲು 2024ರ ಜೂನ್ 24ರಂದು ಕೇರಳ ಸರ್ಕಾರವು ಸಲ್ಲಿಸಿದ್ದ ಪ್ರಸ್ತಾಪವನ್ನು ಬರೋಬ್ಬರಿ 2 ವರ್ಷಗಳ ನಂತರ ಕೇಂದ್ರ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ. ಕೆಲವೇ ವಾರಗಳಲ್ಲಿ (ಏಪ್ರಿಲ್-ಮೇ) ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಕೇಂದ್ರ ಸರ್ಕಾರವು ಹೆಸರು ಬದಲಾವಣೆಗೆ ಅನುಮೋದಿಸಿದೆ.

ಇನ್ನು ರಾಜ್ಯದ ಎಡರಂಗ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಶಶಿ ತರೂರ್‌, "ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಯೋಜನೆಗಳಿಗಾಗಿ ಪ್ರಯತ್ನಿಸದೇ, ಕೇಂದ್ರ ಸರ್ಕಾರದ ಜೊತೆಗೂಡಿ ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ" ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಪಲಾಯನವಾದಿಯಲ್ಲ, ನಾನು ರಾಮನಗರಕ್ಕೆ ಫಿಕ್ಸ್: ಎಲ್ಲಾ ಕಡೆಯಿಂದಲೂ ವಿರೋಧಿಗಳು ನನ್ನ ರೌಂಡಪ್ ಮಾಡ್ತಾರೆ; ನಿಖಿಲ್

ಮೊಬೈಲ್ ಪಾಸ್‌ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ; ಸಂಸದ ನಾಸೀರ್ ಹುಸೇನ್

SCROLL FOR NEXT