ಮತದಾರರ ಪಟ್ಟಿ ಪರಿಷ್ಕರಣೆ  online desk
ದೇಶ

ಪಶ್ಚಿಮ ಬಂಗಾಳದಲ್ಲಿ SIR ಪರಿಶೀಲನೆಗೆ ಜಾರ್ಖಂಡ್, ಒಡಿಶಾದ 200 ನ್ಯಾಯಾಧೀಶರ ನಿಯೋಜನೆ

"ನ್ಯಾಯಾಧೀಶರ ತರಬೇತಿಗಾಗಿ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಪಾಲ್ ಅವರು ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯ ನಂತರ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೋಲ್ಕತ್ತಾ: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಪರಿಶೀಲನೆಗಾಗಿ ಜಾರ್ಖಂಡ್ ಮತ್ತು ಒಡಿಶಾದಿಂದ ಸುಮಾರು 200 ನ್ಯಾಯಾಧೀಶರು ಶೀಘ್ರದಲ್ಲೇ ಪಶ್ಚಿಮ ಬಂಗಾಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ0 ಪಟ್ಟಿ(ಎಸ್ಐಆರ್) ವೀಕ್ಷಕ ಸುಬ್ರತಾ ಗುಪ್ತಾ ಅವರು ಗುರುವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ನೀಡಿದ ಸಲಹೆಯ ಮೇರೆಗೆ ನ್ಯಾಯಾಧೀಶರ ನಿಯೋಜನೆ ಬಗ್ಗೆ ಶೀಘ್ರದಲ್ಲೇ ಚುನಾವಣಾ ಸಮಿತಿಗೆ ತಿಳಿಸಲಾಗುವುದು ಎಂದು ಗುಪ್ತಾ ಹೇಳಿದ್ದಾರೆ.

"ನ್ಯಾಯಾಧೀಶರ ತರಬೇತಿಗಾಗಿ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಪಾಲ್ ಅವರು ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯ ನಂತರ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಫೆಬ್ರವರಿ 24 ರಂದು ಸುಪ್ರೀಂ ಕೋರ್ಟ್ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಲು ಮತ್ತು ನೆರೆಯ ಜಾರ್ಖಂಡ್ ಮತ್ತು ಒಡಿಶಾದಿಂದ ಜಿಲ್ಲಾ ನ್ಯಾಯಾಧೀಶರನ್ನು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯಲ್ಲಿ 80 ಲಕ್ಷ ಅರ್ಜಿಗಳು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಲು ಅನುಮತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ