ಕೇಂದ್ರ ಸಚಿವ ನಿತಿನ್ ಗಡ್ಕರಿ 
ದೇಶ

ಗ್ರೇಡ್ ಆಧರಿತ ಚಾಲನಾ ಪರವಾನಗಿ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಚಿಂತನೆ; ಸಚಿವ ನಿತಿನ್ ಗಡ್ಕರಿ

ನಾವು ಶೀಘ್ರದಲ್ಲೇ ಈ ಯೋಜನೆಯನ್ನು ಪ್ರಾರಂಭಿಸಲಿದ್ದೇವೆ. ರಸ್ತೆ ಸುರಕ್ಷತೆಯು ದೇಶದ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ಪ್ರತಿ ವರ್ಷ, ಭಾರತವು 5 ಲಕ್ಷ ಅಪಘಾತಗಳು ಮತ್ತು 1.8 ಲಕ್ಷ ಸಾವುಗಳಿಗೆ ಸಾಕ್ಷಿಯಾಗುತ್ತಿದೆ.

ನವದೆಹಲಿ: ಜವಾಬ್ದಾರಿಯುತ ಚಾಲನೆಯನ್ನು ಉತ್ತೇಜಿಸಲು ಮತ್ತು ಅಪಘಾತಗಳನ್ನು ತಡೆಗಟ್ಟಲು, ಕೆಲವು ಸಂಚಾರ ನಿಯಮ ಉಲ್ಲಂಘನೆಗಳಿಗೆ ಪರವಾನಗಿ ರದ್ದತಿ ಸೇರಿದಂತೆ ಕಠಿಣ ನಿಬಂಧನೆಗಳೊಂದಿಗೆ ಗ್ರೇಡ್ ಆಧಾರಿತ ಚಾಲನಾ ಪರವಾನಗಿ ವ್ಯವಸ್ಥೆಯನ್ನು ಪರಿಚಯಿಸಲು ಸರ್ಕಾರ ಯೋಜಿಸುತ್ತಿದೆ.

ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದು, ಅತಿ ವೇಗ, ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಮತ್ತು ಕುಡಿದು ವಾಹನ ಚಲಾಯಿಸುವುದು ಮುಂತಾದ ಅಂಶಗಳಿಂದಾಗಿ ದೇಶದಾದ್ಯಂತ ಪ್ರತಿ ವರ್ಷ ಸುಮಾರು 1.8 ಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಕೈಗಾರಿಕಾ ಸಂಸ್ಥೆ ಸಿಐಐ ಆಯೋಜಿಸಿದ್ದ ರಸ್ತೆ ಸುರಕ್ಷತೆಯ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ಜೀವಗಳು ಅತ್ಯಂತ ಮುಖ್ಯವಾಗಿದ್ದು, ಸರ್ಕಾರವು ರಸ್ತೆ ಸುರಕ್ಷತೆಗೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರವು ಈಗಾಗಲೇ ಸಂಚಾರ ಉಲ್ಲಂಘನೆಗಳಿಗೆ ದಂಡವನ್ನು ಹೆಚ್ಚಿಸಿದೆ. ಆದರೆ, ದೊಡ್ಡ ಸಮಸ್ಯೆ ಎಂದರೆ ಜಾರಿ ಮಾಡುವುದಾಗಿದೆ. ಕಾನೂನಿನ ಬಗ್ಗೆ ಭಯ ಅಥವಾ ಗೌರವವಿಲ್ಲ ಎಂದು ಹೇಳಿದರು.

'ನಾವು ಚಾಲನಾ ಪರವಾನಗಿಗಳಲ್ಲಿ ಶ್ರೇಣೀಕೃತ ಅಂಕ ವ್ಯವಸ್ಥೆಯನ್ನು ತರುತ್ತಿದ್ದೇವೆ. ಇದರ ಅಡಿಯಲ್ಲಿ ಸಂಚಾರ ಅಪರಾಧಗಳಿಗೆ ಕೆಲವು ಅಂಕಗಳನ್ನು ಕಡಿತಗೊಳಿಸಬಹುದು. ಎಲ್ಲ ಅಂಕಗಳು ಕಡಿತಗೊಳಿಸಿದಾಗ, ಅಂತಹ ಚಾಲನಾ ಪರವಾನಗಿಯನ್ನು ಆರು ತಿಂಗಳವರೆಗೆ ಅಮಾನತುಗೊಳಿಸಬಹುದು ಅಥವಾ ಪುನರಾವರ್ತಿತ ಅಪರಾಧಗಳಿಗೆ ರದ್ದುಗೊಳಿಸಬಹುದು' ಎಂದರು.

'ನಾವು ಶೀಘ್ರದಲ್ಲೇ ಈ ಯೋಜನೆಯನ್ನು ಪ್ರಾರಂಭಿಸಲಿದ್ದೇವೆ. ರಸ್ತೆ ಸುರಕ್ಷತೆಯು ದೇಶದ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ಪ್ರತಿ ವರ್ಷ, ಭಾರತವು 5 ಲಕ್ಷ ಅಪಘಾತಗಳು ಮತ್ತು 1.8 ಲಕ್ಷ ಸಾವುಗಳಿಗೆ ಸಾಕ್ಷಿಯಾಗುತ್ತಿದೆ. ಈ ಸಾವುಗಳಲ್ಲಿ ಶೇ 72ರಷ್ಟು 18-45 ವರ್ಷ ವಯಸ್ಸಿನವರಾಗಿದ್ದು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪಘಾತಕ್ಕೀಡಾದವರ ಸಂಖ್ಯೆ 10,119 ಮತ್ತು ಹೆಲ್ಮೆಟ್ ಬಳಸದ ಕಾರಣ ಸಾವುಗಳು 54,122 ಎಂದು ಗಡ್ಕರಿ ಹೇಳಿದರು.

ಸೀಟ್ ಬೆಲ್ಟ್ ಧರಿಸದ ಕಾರಣ 14,466 ಸಾವುಗಳು ಸಂಭವಿಸಿವೆ. ಆದರೆ, ಅತಿ ವೇಗದಿಂದ 1.2 ಲಕ್ಷ ಸಾವುಗಳು ಸಂಭವಿಸಿವೆ. ತಪ್ಪು ದಿಕ್ಕಿನಲ್ಲಿ ಚಾಲನೆ, ಕುಡಿದು ಚಾಲನೆ ಮತ್ತು ಮೊಬೈಲ್ ಫೋನ್ ಬಳಕೆ ಮಾಡುವುದು ಸಾವಿಗೆ ಪ್ರಮುಖ ಕಾರಣಗಳಾಗಿವೆ. ಚಿಕಿತ್ಸಾ ವೆಚ್ಚ ಮತ್ತು ಕಾನೂನು ವಿಧಿವಿಧಾನಗಳ ಬಗ್ಗೆ ಚಿಂತಿಸದೆ ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸಚಿವರು ಸಾರ್ವಜನಿಕರನ್ನು ಒತ್ತಾಯಿಸಿದರು.

ಪಿಎಂ ರಹತ್ (ರಸ್ತೆ ಅಪಘಾತ ಸಂತ್ರಸ್ತರ ಆಸ್ಪತ್ರೆಗೆ ದಾಖಲು ಮತ್ತು ಖಚಿತ ಚಿಕಿತ್ಸೆ) ಯೋಜನೆಯು ಅಪಘಾತ ಸಂತ್ರಸ್ತರಿಗೆ ತುರ್ತು ಪ್ರತಿಕ್ರಿಯೆ ವ್ಯವಸ್ಥೆಯನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ, ಯಾವುದೇ ವರ್ಗದ ರಸ್ತೆಯಲ್ಲಿ ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಅಪಘಾತದ ದಿನಾಂಕದಿಂದ 7 ದಿನಗಳವರೆಗೆ ₹1.5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹತೆ ನೀಡುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT