ರೈಲಿನ ಸಾಂದರ್ಭಿಕ ಚಿತ್ರ 
ದೇಶ

ಬೆಂಗಳೂರಿನಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರ: ಇದು ಎಲ್ಲೆಲ್ಲಿ ನಿಲುಗಡೆಯಾಗಲಿದೆ?

ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ.

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ (LTT) ಮಾರ್ಚ್ 1 ರಂದು ಒನ್‌ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ.

ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ. ಇದು ಮರುದಿನ (ಸೋಮವಾರ) ರಾತ್ರಿ 11.30 ಗಂಟೆಗೆ ಮುಂಬೈನ ಎಲ್‌ಟಿಟಿ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಎಲ್ಲೆಲ್ಲಿ ನಿಲುಗಡೆಯಾಗಲಿದೆ?

ಈ ರೈಲು ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ಲೋನಾವಾಲಾ ಹಾಗೂ ಕಲ್ಯಾಣ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲಿನಲ್ಲಿ ಒಟ್ಟು 19 ಬೋಗಿಗಳಿರಲಿವೆ. ಇವುಗಳಲ್ಲಿ 15 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಎಸ್‌ಎಲ್‌ಆರ್ ಬೋಗಿಗಳು ಇರಲಿವೆ. ವಿಶೇಷವೆಂದರೆ, ರೈಲಿನಲ್ಲಿರುವ 2 ಎಸಿ ಬೋಗಿಗಳು ಲಾಕ್ ಮಾಡಿದ (ಬೀಗ ಹಾಕಿದ) ಸ್ಥಿತಿಯಲ್ಲಿರಲಿದ್ದು, ಪ್ರಯಾಣಿಕರ ಬಳಕೆಗೆ ಲಭ್ಯವಿರುವುದಿಲ್ಲ.

ಇದು ಸಂಪೂರ್ಣ ಕಾಯ್ದಿರಿಸದ (Unreserved) ರೈಲಾಗಿದ್ದು, ಪ್ರಯಾಣಿಕರು 'ರೈಲ್ಒನ್' ಆ್ಯಪ್ ಮೂಲಕ ಅಥವಾ ನಿಲ್ದಾಣದ ಕೌಂಟರ್‌ಗಳಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ರಂಜಾನ್ ಉಪವಾಸದ ಸಮಯದಲ್ಲಿ ಆರೋಗ್ಯಕರ ಆಹಾರ ಸೇವನೆ

SCROLL FOR NEXT