ಶಬರಿಮಲೆ ದೇಗುಲ 
ದೇಶ

ಶಬರಿಮಲೆ ದೇಗುಲದಲ್ಲಿ 'ಚಿನ್ನ ಕಳ್ಳತನ': ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿಯಿಂದ SIT ವಶಕ್ಕೆ ಪಡೆದ ಚಿನ್ನವೆಷ್ಟು ಗೊತ್ತಾ? ಕೋರ್ಟ್ ಗೆ ಮಾಹಿತಿ

ದೇವಸ್ಥಾನದಿಂದ ಕದ್ದ ಚಿನ್ನವನ್ನು ಇನ್ನೂ ಸಂಪೂರ್ಣವಾಗಿ ವಸೂಲಿ ಮಾಡಲು ತನಿಖಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ಹೆಚ್ಚಿನದಾಗಿ ದ್ವಾರಪಾಲಕರ ವಿಗ್ರಹಗಳ ಚಿನ್ನದ ಲೇಪನ ಕಳುವು ಆಗಿರುವುದಾಗಿ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯಕ್ಕೆ ತಿಳಿಸಿದೆ.

ಗರ್ಭಗುಡಿಯ ಬಾಗಿಲಿನರುವ ದ್ವಾರಪಾಲಕರಾದ ಶಿವ ಮತ್ತು ವೈಯಾಲಿ ರೂಪದ ವಿಗ್ರಹಗಳಲ್ಲಿ ಚಿನ್ನ ನಾಪತ್ತೆಯಾಗಿದೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿದೆ.

ದೇವಸ್ಥಾನದಿಂದ ಕದ್ದ ಚಿನ್ನವನ್ನು ಇನ್ನೂ ಸಂಪೂರ್ಣವಾಗಿ ವಸೂಲಿ ಮಾಡಲು ತನಿಖಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. 584 ಗ್ರಾಂ ಚಿನ್ನ ಮಾತ್ರ ಪತ್ತೆಯಾಗಿದ್ದು, ಇದು ಮೂಲತಃ ದೇವಸ್ಥಾನದಿಂದ ಕಳವು ಮಾಡಿದ್ದಕ್ಕಿಂತ ಕಡಿಮೆಯದ್ದಾಗಿದೆ ಎಂದು ತಂಡ ಮಾಹಿತಿ ನೀಡಿದೆ.

ಚೆನ್ನೈನಲ್ಲಿ ಸ್ಮಾರ್ಟ್ ಕ್ರಿಯೇಷನ್ ನಿಂದ 110 ಗ್ರಾಂ ಚಿನ್ನ ಹಾಗೂ ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿಯಿಂದ 474 ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು SIT ನ್ಯಾಯಾಲಯಕ್ಕೆ ತಿಳಿಸಿದೆ.

ಚಿನ್ನ ಹೊರತೆಗೆಯುವ ಮತ್ತು ಎಲೆಕ್ಟ್ರೋಪ್ಲೇಟಿಂಗ್ ಕೆಲಸಕ್ಕೆ ಶುಲ್ಕವಾಗಿ ಚೆನ್ನೈನ ಸ್ಮಾರ್ಟ್ ಕ್ರಿಯೇಷನ್ ಸಂಸ್ಥೆ ಚಿನ್ನ ತೆಗೆದುಕೊಂಡಿತ್ತು. ಉಳಿದ ಚಿನ್ನದ ಒಂದು ಭಾಗವನ್ನು ರೊದ್ದಂ ಜ್ಯುವೆಲ್ಲರಿಗೆ ಕಳುಹಿಸಲಾಗಿತ್ತು. ಅದು ಗೋವರ್ಧನ್ ಅವರ ಒಡೆತನದಲ್ಲಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಎರಡು ಜ್ಯುವೆಲರಿಗಳಿಂದ ವಶಪಡಿಸಿಕೊಂಡ ಚಿನ್ನವನ್ನು ಪರೀಕ್ಷೆಗಾಗಿ ವಿಎಸ್‌ಎಸ್‌ಸಿಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಅವುಗಳನ್ನು ಚಿನ್ನದ ಲೇಪಿತ ಶೀಟ್ ಗಳಿಂದ ಹೊರತೆಗೆಯಲಾಗಿದೆಯೇ ಎಂದು ಖಚಿತಪಡಿಸಲು ಎಸ್‌ಐಟಿಗೆ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಕಳ್ಳಸಾಗಣೆಯಲ್ಲಿ ತೊಡಗಿರುವ ದರೋಡೆಕೋರರಿಗೆ ಚಿನ್ನವನ್ನು ಹಸ್ತಾಂತರಿಸಲಾಗಿದೆಯೇ ಎಂಬ ಬಗ್ಗೆ ಅನುಮಾನ ಹುಟ್ಟಿಕೊಳ್ಳಲಿದೆ ಎಂದು ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್