ನಿತೀಶ್ ಕುಮಾರ್ 
ದೇಶ

ಬಿಹಾರ: ವೃದ್ಧರಿಗೆ 'ಮನೆ ಬಾಗಿಲಿಗೆ ಆರೋಗ್ಯ ಸೇವೆ'; ನಿತೀಶ್ ಸರ್ಕಾರ ಘೋಷಣೆ

ಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಪಾಟ್ನಾ: ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲು ಆದೇಶಿಸಿರುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿತೀಶ್, ಅಗತ್ಯವಿರುವ ಹಿರಿಯ ನಾಗರಿಕರಿಗೆ ಶುಶ್ರೂಷಕರ ನೆರವು, ಮನೆಯಲ್ಲೇ ರಕ್ತದೊತ್ತಡ, ಇಸಿಜಿ ಹಾಗೂ ಇತರ ಪರೀಕ್ಷೆ ಹಾಗೂ ಇತರ ರೀತಿಯ ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಆರೋಗ್ಯ ಸೇವೆಗಳು ಅಗತ್ಯವಿರುವ ಸಮಯದಲ್ಲಿ ಅವರ ಮನೆಗಳಲ್ಲೇ ಸಿಗುವಂತೆ ನೋಡಿಕೊಳ್ಳುವುದು ನಮ್ಮ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.

ಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಆರೋಗ್ಯ ಸಂಬಂಧಿತ ಸೌಲಭ್ಯಗಳು ರಾಜ್ಯದ ಹಿರಿಯ ನಾಗರಿಕರಿಗೆ ಅವರ ಮನೆಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಲು ತ್ವರಿತವಾಗಿ ಕಾರ್ಯೋನ್ಮುಖವಾಗುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಬರೆದಿದ್ದಾರೆ.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ಸಮಾಜದ ಎಲ್ಲ ವರ್ಗಗಳ ಜನರ ಉನ್ನತಿಗಾಗಿ ಮತ್ತು ನ್ಯಾಯಯುತ ಅಭಿವೃದ್ಧಿಯ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ಪ್ರತಿಯೊಂದು ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇವೆ. ನಾವು ಇಡೀ ಬಿಹಾರವನ್ನು ನಮ್ಮ ಕುಟುಂಬವೆಂದು ಪರಿಗಣಿಸಿದ್ದೇವೆ ಎಂದಿದ್ದಾರೆ.

ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲು ರಾಜ್ಯ ಸರ್ಕಾರ 'ಸಾತ್ ನಿಶ್ಚಯ್ -3' ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

ನವೆಂಬರ್ 24, 2005 ರಂದು ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ಸಮಾಜದ ಎಲ್ಲಾ ವರ್ಗಗಳ ಜನರ ಉನ್ನತಿಗಾಗಿ ಮತ್ತು ಪ್ರತಿಯೊಂದು ವಲಯದ ಅಭಿವೃದ್ಧಿಗಾಗಿ, ನ್ಯಾಯದೊಂದಿಗೆ ಅಭಿವೃದ್ಧಿಯ ತತ್ವದಿಂದ ನಡೆಯುತ್ತಿದ್ದೇವೆ. ನಾವು ಇಡೀ ಬಿಹಾರವನ್ನು ನಮ್ಮ ಕುಟುಂಬವೆಂದು ಪರಿಗಣಿಸಿದ್ದೇವೆ ಮತ್ತು ಪ್ರತಿಯೊಬ್ಬರ ಗೌರವವನ್ನು ಸಂಪೂರ್ಣವಾಗಿ ನೋಡಿಕೊಂಡಿದ್ದೇವೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

RSS ಗಲಿಬಿಲಿಗೊಂಡರೆ BJP ಏಕೆ ಬುಸುಗುಡುತ್ತೆ: ಬಾಲ ಯಾರ ಕೈಯ್ಯಲ್ಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕುಮಾರಣ್ಣನ ಪಂಚೆ ಒಂದೇ ಸಿಂಪಲ್-ಉಳಿದದ್ದೆಲ್ಲಾ ದುಬಾರಿ: ಜಮೀನನ್ನು ಅನಿತಾ ಕುಮಾರಸ್ವಾಮಿ ರಾಮ್‌ರಾಜ್‌ ಪಂಚೆ ಮಾರಿ ಖರೀದಿಸಿದ್ದಾರೆಯೇ?