ರೇಖಾ ಆರ್ಯ-ಗಿರ್ಧಾರಿ ಲಾಲ್ ಸಾಹು 
ದೇಶ

ಕಾಸು ಕೊಟ್ಟರೆ ಬಿಹಾರದಲ್ಲಿ 20 ಸಾವಿರಕ್ಕೂ ಹುಡ್ಗೀರು ಸಿಗ್ತಾರೆ ಹೇಳಿಕೆಗೆ ತೀವ್ರ ವಿರೋಧ: ಉತ್ತರಾಖಂಡ BJP ಸಚಿವೆ ಪತಿ ಕ್ಷಮೆಯಾಚನೆ!

ಉತ್ತರಾಖಂಡ ಸಚಿವೆ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ 20,000-25,000 ರೂಪಾಯಿಗೆ ಹುಡುಗಿರೂ ಸಿಗುತ್ತಾರೆ. ನಾವು ಬಿಹಾರದಿಂದ ಬ್ಯಾಚುಲರ್‌ಗಳಿಗಾಗಿ ಹುಡುಗಿಯರನ್ನು ತರುತ್ತೇವೆ ಎಂದು ಹೇಳಿರುವುದು ವಿಡಿಯೋದಲ್ಲಿ ಕಾಣಬಹುದು.

ಪಾಟ್ನಾ: ಉತ್ತರಾಖಂಡ ಸಚಿವೆ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ 20,000-25,000 ರೂಪಾಯಿಗೆ ಹುಡುಗಿರೂ ಸಿಗುತ್ತಾರೆ. ನಾವು ಬಿಹಾರದಿಂದ ಬ್ಯಾಚುಲರ್‌ಗಳಿಗಾಗಿ ಹುಡುಗಿಯರನ್ನು ತರುತ್ತೇವೆ ಎಂದು ಹೇಳಿರುವುದು ವಿಡಿಯೋದಲ್ಲಿ ಕಾಣಬಹುದು. ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ಬಿಹಾರದಲ್ಲಿ ರಾಜಕೀಯ ಬಿಸಿ ಏರಿಸಿದೆ. ಬಿಜೆಪಿ ಮತ್ತು ಆರ್‌ಜೆಡಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

ನೀವು ಮದುವೆಯಾಗಿಲ್ಲ. ಮದುವೆಗೆ ಸಿದ್ಧರಿದ್ದಿರಾ? ನಿಮಗೆ ನಾಲ್ಕು ಅಥವಾ ಐದು ಮಕ್ಕಳಿದ್ದರೂ ಬಿಹಾರದಲ್ಲಿ, 20,000-25,000 ರೂಪಾಯಿಗಳಿಗೆ ಹುಡುಗಿಯರು ಸಿಗುತ್ತಾರೆ. ಅವರನ್ನು ನೀವು ಮದುವೆಯಾಗಬಹುದು ಎಂದು ಹೇಳಿದ್ದಾರೆ. ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಇದು ಬಿಹಾರದ ಮಹಿಳೆಯರಿಗೆ ಮಾತ್ರವಲ್ಲದೆ ಇಡೀ ದೇಶದ ಅರ್ಧದಷ್ಟು ಜನಸಂಖ್ಯೆಗೆ ಮಾಡಿದ ಅವಮಾನ ಎಂದು ಬಿಹಾರ ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಹೇಳಿದ್ದಾರೆ. ಮಹಿಳೆಯರನ್ನು ಹಣದ ದೃಷ್ಟಿಯಿಂದ ಮೌಲ್ಯೀಕರಿಸುವ ಕಲ್ಪನೆಯು ಅನಾರೋಗ್ಯಕರ ಮನಸ್ಥಿತಿಯ ಉತ್ಪನ್ನವಾಗಿದೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಅಂತಹ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಉತ್ತರಾಖಂಡ ಸರ್ಕಾರದಲ್ಲಿರುವ ಸಚಿವರ ಪತಿ ಮಹಿಳೆಯರನ್ನು ಅವಮಾನಿಸುತ್ತಿದ್ದಾರೆ. ಮಹಿಳೆಯರಿಗೆ ಬೆಲೆ ಕಟ್ಟಲಾಗುತ್ತಿದೆ ಎಂದು ಆರ್‌ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದರು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಬಿಜೆಪಿ ಕ್ಷಮೆಯಾಚಿಸಬೇಕು. ಒಂದೆಡೆ, ಬಿಹಾರದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ 10,000 ರೂಪಾಯಿಗಳನ್ನು ನೀಡಲಾಗಿದ್ದರೆ, ಮತ್ತೊಂದೆಡೆ, ಬಿಜೆಪಿ ಸದಸ್ಯರೇ ಅವರನ್ನು ಅವಮಾನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಚಿವೆ ರೇಖಾ ಅವರ ಪತಿ ಗಿರ್ಧಾರಿ ಲಾಲ್ ಸಾಹು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ ಮಾಡಲು ಬರೇಲಿಗೆ ಹೋಗುತ್ತೇನೆ. ರೇಖಾ ಚುನಾವಣೆಯಲ್ಲಿ ಸ್ಪರ್ಧಿಸುವ ಸ್ಥಳದ ಮಹಿಳೆಯರನ್ನು ಅವರು ದೇವತೆಗಳಂತೆ ಗೌರವಿಸುತ್ತಾರೆ. ನನ್ನ ಹೇಳಿಕೆಯ ಲಾಭ ಪಡೆಯಲು ವಿರೋಧ ಪಕ್ಷಗಳು ನನ್ನ ಮಾತನ್ನು ತಿರುಚಿವೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ನಾನು ಕೈಮುಗಿದು ಕ್ಷಮೆಯಾಚಿಸುತ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!