ಅರಣ್ಯಾಧಿಕಾರಿ ಅಶ್ರಫ್ 
ದೇಶ

ಜುನಾಗಢ: ಬಾಲಕನ ಕೊಂದಿದ್ದ ಸಿಂಹಿಣಿ ಕಾರ್ಯಾಚರಣೆ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಅರಣ್ಯಾಧಿಕಾರಿ ಸಾವು!

ಹೊಲವೊಂದರಲ್ಲಿ ಅಡಗಿದ್ದ ಸಿಂಹವನ್ನು ಸೆರೆಯಿಡಿಯಲು 30 ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲಿ ಪಂಜರವನ್ನು ಇಟ್ಟು ಪ್ರಯತ್ನಿಸಿದ್ದಾರೆ.

ಅಹಮದಾಬಾದ್: ನರಭಕ್ಷಕ ಸಿಂಹವನ್ನು ಸೆರೆಹಿಡಿಯುವ ವಿಫಲ ಯತ್ನದಲ್ಲಿ ಆಕಸ್ಮಿಕವಾಗಿ ಹಾರಿದ ಗುಂಡು ಅರಣ್ಯಾಧಿಕಾರಿಯನ್ನು ಬಲಿಪಡಿದಿರುವ ಘಟನೆ ಗುಜರಾತ್ ನ ಜುನಾಗಢ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ ವಲಸೆ ಕಾರ್ಮಿಕರೊಬ್ಬರ ನಾಲ್ಕು ವರ್ಷದ ಬಾಲಕನನ್ನು ಸಿಂಹ ತಿಂದು ಹಾಕಿತ್ತು. ಇದರಿಂದ ನಾನಿ ಮೊನ್‌ಪಾರಿ ಎಂಬ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಮಧ್ಯಾಹ್ನದ ವೇಳೆಗೆ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಇಳಿದಿದೆ.

ಹೊಲವೊಂದರಲ್ಲಿ ಅಡಗಿದ್ದ ಸಿಂಹವನ್ನು ಸೆರೆಯಿಡಿಯಲು 30 ಕ್ಕೂ ಹೆಚ್ಚು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲಿ ಪಂಜರವನ್ನು ಇಟ್ಟು ಪ್ರಯತ್ನಿಸಿದ್ದಾರೆ. ಆದರೆ, ಸಿಂಹಿಣಿ ಇದ್ದಕ್ಕಿದ್ದಂತೆ ಪಂಜರದ ಮೇಲೆ ಹತ್ತಿ, ಭಯ ಭೀತಿ ಸೃಷ್ಟಿಸಿದೆ.

ಈ ಸಂದರ್ಭದಲ್ಲಿ ಸಿಂಹದ ಕಡೆಗೆ ಹಾರಿಸಬೇಕಾದ ಗನ್, ಆಕಸ್ಮಿಕವಾಗಿ ಅಲ್ಲಿಯೇ ಇದ್ದ ಅರಣ್ಯಾಧಿಕಾರಿ ಆಶ್ರಫ್ ಖಾನ್ ಅವರತ್ತ ಹಾರಿದೆ. ಸೆಕೆಂಡ್ ಗಳಲ್ಲಿಯೇ ಇದೆಲ್ಲಾ ಮುಗಿದು ಹೋಗಿದೆ.

ಸಿಂಹದತ್ತ ಹೊಡೆಯಲಾದ ಗುಂಡು, ಆಶ್ರಫ್ ಗೆ ತಗುಲಿದೆ ಎಂದು ಘಟನಾ ಸ್ಥಳದಲ್ಲಿದ್ದ ಅರಣ್ಯಾ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಕ್ಷಣ ಕುಸಿದು ಬಿದ್ದ ಅಶ್ರಫ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ತುರ್ತು ಚಿಕಿತ್ಸೆಗಾಗಿ ವೈಸವಾಡರ್ ನಾಗರಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತದ ನಂತರ ಜುನಾಗಢ ನಾಗರಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಡಾಕ್ಟರ್ ಪ್ರಯತ್ನದ ಹೊರತಾಗಿಯೂ ಅಶ್ರಫ್ ಮೃತಪಟ್ಟಿದ್ದಾರೆ.

ಆಕಸ್ಮಿಕವಾಗಿ ಗುಂಡು ಹಾರಿ ಅರಣ್ಯಾಧಿಕಾರಿಯೊಬ್ಬರು ಸಾವನ್ನಪ್ಪಿರುವುದು ಜಿಲ್ಲೆಯ ಅರಣ್ಯ ಇಲಾಖೆ ಇತಿಹಾಸದಲ್ಲಿ ಮೊದಲನೇಯದು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್