ವೈರಲ್ ಆಗಿರುವ ತಾಯಿ-ಮಗ 
ದೇಶ

ತಾಯಿಗೆ 'ಸರ್ಪ್ರೈಸ್ ಗಿಫ್ಟ್' ನೀಡಿದ 17 ವರ್ಷದ ಮಗ! ಇಮೋಷನಲ್ Video ವೈರಲ್! ನೆಟ್ಟಿಗರು ಫಿದಾ

17 ವರ್ಷದ ಯುವಕನೊಬ್ಬ ತನ್ನ ತಾಯಿ ಮಾಡಿರುವ ಸಾಲವನ್ನು ತೀರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಕ್ಕಳು ದೊಡ್ಡವರಾದ ಮೇಲೆ ಒಳ್ಳೆಯ ಸ್ಥಾನಕ್ಕೇರಬೇಕು. ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು. ನಮ್ಮನೆಲ್ಲಾ ಚೆನ್ನಾಗಿ ನೋಡಿಕೊಳ್ಳಬೇಕು ಎಂಬುದು ಪ್ರತಿಯೊಬ್ಬ ತಂದೆ ತಾಯಿಯ ಕನಸು ಆಗಿರುತ್ತದೆ. ಈ ಕನಸು ಈಡೇರಿಕೆಗೆ ಎಲ್ಲಾ ರೀತಿಯ ತ್ಯಾಗ ಮಾಡಿರುತ್ತಾರೆ. ಇಂದಿನ ಸಮಾಜದಲ್ಲಿ ಹೆತ್ತವರ ಇಂತಹ ಕನಸು ಈಡೇರಿಸುವವರು ಬಹಳ ವಿರಳ.

ಅಂತಹ 17 ವರ್ಷದ ಯುವಕನೊಬ್ಬ ತನ್ನ ತಾಯಿ ಮಾಡಿರುವ ಸಾಲವನ್ನು ತೀರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲವು ನೆಟ್ಟಿಗರು ತಾಯಿ-ಮಗನ ಬಾಂಧವ್ಯಕ್ಕೆ ಫಿದಾ ಆಗಿದ್ದು, ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಹೌದು. ಅಮನ್ ದುಗ್ಗಲ್ ಎಂಬ ಯುವಕ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಕ್ಲಿಪ್ ನಲ್ಲಿ, ತನ್ನ ತಾಯಿಗೆ ಸರ್ ಫ್ರೈಸ್ ನೀಡುವ ಮೂಲಕ ತನ್ನ ಪ್ರೀತಿ ಹಾಗೂ ಗೌರವವನ್ನು ವ್ಯಕ್ತಪಡಿಸಿದ್ದಾನೆ. ಸಾಲದಿಂದ ಮುಕ್ತಗೊಳಿಸುವ ಗಿಫ್ಟ್ ನೀಡುವ ಮೂಲಕ ತನ್ನ ತಾಯಿಯನ್ನು ಅಚ್ಚರಿಗೊಳಿಸಿದ್ದಾನೆ. ತನ್ನ ತಾಯಿಯನ್ನು ಪ್ರೀತಿಸುತ್ತಿರುವುದಾಗಿ ಮತ್ತು ಆಕೆ ಮಾಡಿದ ಸಾಲವನ್ನು ತೀರಿಸಲು ತಾನು ಸ್ವಲ್ಪ ನೆರವಾಗುವುದಾಗಿ ಹೇಳುವುದು ವಿಡಿಯೋದಲ್ಲಿದೆ.

ತನಗಾಗಿ ಆಕೆ ಮಾಡಿದ ಎಲ್ಲದಕ್ಕೂ ಧನ್ಯವಾದ ಹೇಳುತ್ತಾನೆ. ಆಕೆ ತನ್ನ ಜೀವನದ ಅತ್ಯಂತ ವಿಶೇಷ ಮಹಿಳೆ ಎಂದು ಕರೆಯುತ್ತಾನೆ. ಇದರಿಂದ ತಾಯಿಗೆ ಹೃದಯ ತುಂಬಿ ಬಂದಿದ್ದು, ತಾನೂ ಕೂಡಾ ಆತನನ್ನು ಹೆಚ್ಚಾಗಿ ಪ್ರೀತಿಸುವುದಾಗಿ ಹೇಳುತ್ತಾಳೆ. ಆದರೆ, ಆಕೆ ಯಾಕೆ ಅಳುತ್ತಾಳೆ ಎಂಬುದು ಅರ್ಥವಾಗುವುದಿಲ್ಲ. ನಂತರ ಅಮನ್ ಆಕೆಗೆ ಕಣ್ಣು ತೆರೆಯಲು ಹೇಳಿ ಹಣವನ್ನು ನೀಡುತ್ತಾನೆ. ಎಲ್ಲಾ ಸಾಲವನ್ನು ತೀರಿಸಲು ಈ ಹಣವನ್ನು ಈಗ ನೀಡುತ್ತಿದ್ದೇನೆ. ತಿಂಗಳ ಎಲ್ಲಾ ಖರ್ಚು ವೆಚ್ಚಗಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳುತ್ತಾನೆ. ಈ ಮಾತು ಕೇಳಿದ ತಾಯಿ ಆನಂದ ಭಾಷ್ಪದಲ್ಲಿ ಆತನನ್ನು ತಬ್ಬಿಕೊಳ್ಳುತ್ತಾಳೆ.

ತನ್ನ ತಾಯಿ ನನಗಾಗಿ ಎಲ್ಲವನ್ನೂ ನೀಡಿದ್ದಾರೆ. ಎಲ್ಲಾ ತ್ಯಾಗ ಮಾಡಿದ್ದಾರೆ. ಈಗ ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗಿದೆ ಎಂದು ಅಮನ್ ಸಂತಸ ಹಾಗೂ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಕ್ಷಣವನ್ನು ತಾನು ಅನೇಕ ಬಾರಿ ಕಲ್ಪಿಸಿಕೊಂಡಿದ್ದೇನೆ ಮತ್ತು ಒಂದು ವರ್ಷದ ಯೋಜನೆ ನಂತರ ಅದು ಈಗ ನನಸು ಆಗಿದೆ. ದೇವರು, ತಾಯಿಗೆ ತುಂಬಾ ಧನ್ಯವಾದಗಳು ಎಂದು ಬರೆದುಕೊಡಿದ್ದಾರೆ. ಅಮನ್ ಅವರ ಪ್ರೀತಿಗೆ ಸಾಮಾಜಿಕ ಬಳಕೆದಾರರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ "ವಾಟ್ ಎ ಬ್ಯೂಟಿಫುಲ್ ವಿಡಿಯೋ" ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

'ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆ ಊಟ, ಕೋರಿಕೆ ಮೇರೆಗೆ ಅಲ್ಲ': ಪವಿತ್ರಾಗೌಡ ಅಂಡ್ ಟೀಂಗೆ HighCourt ಶಾಕ್!

ಖಾಲಿ ಹುದ್ದೆಗಳ ಭರ್ತಿಗೆ SC ಒಳ ಮೀಸಲಾತಿ ಪರಿಗಣಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

SCROLL FOR NEXT