ಶಶಿ ತರೂರ್ 
ದೇಶ

ದೂರವಾಗಿದ್ದ ಶಶಿ ತರೂರ್ ಈಗ ಹತ್ತಿರ: ಪಕ್ಷದಲ್ಲಿ ಹೊಸ ಜವಾಬ್ದಾರಿ ನಿರೀಕ್ಷೆ; ಕಾಂಗ್ರೆಸ್ ಸಂಸದ ಹೇಳಿದ್ದೇನು?

ಕೇರಳದಲ್ಲಿ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬಂದರೆ ಶಶಿ ತರೂರ್‌ಗೆ ದೆಹಲಿಯಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ರಾಯಭಾರಿಗೆ ಸಮಾನವಾದ ಹುದ್ದೆಯನ್ನು ನೀಡುವ ಸಾಧ್ಯತೆಯ ಕುರಿತು ನಾಯಕತ್ವದ ಕೆಲವು ವಿಭಾಗಗಳಲ್ಲಿ ಪರಿಶೋಧನಾತ್ಮಕ ಮಟ್ಟದ ಚರ್ಚೆ ನಡೆಯುತ್ತಿದೆ.

ಕೊಚ್ಚಿ: ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕೆಲವು ಹೇಳಿಕೆಗಳು, ಬಿಜೆಪಿ ಪರ ಕೆಲವು ನಿಲುವುಗಳಿಂದ ಸುದ್ದಿಯಾಗಿದ್ದ ಕೇರಳದ ತಿರುವನಂತಪುರ ಕ್ಷೇತ್ರದ ಸಂಸದ ಶಶಿ ತರೂರ್ ಮತ್ತೆ ಕಾಂಗ್ರೆಸ್ ಗೆ ಹತ್ತಿರವಾಗುವ ಲಕ್ಷಣ ಕಾಣುತ್ತಿದೆ. ಪಕ್ಷದ ಮೂಲಗಳ ಪ್ರಕಾರ, ನಾಲ್ಕು ಬಾರಿ ತಿರುವನಂತಪುರಂ ಸಂಸದರಾಗಿರುವ ಶಶಿ ತರೂರ್‌ಗೆ ಹೈಕಮಾಂಡ್ ದೊಡ್ಡ ಹುದ್ದೆಯ ಜವಾಬ್ದಾರಿ ನೀಡಬಹುದು ಎಂದು ಹೇಳಲಾಗುತ್ತಿದೆ.

ಕೇರಳದಲ್ಲಿ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬಂದರೆ ಶಶಿ ತರೂರ್‌ಗೆ ದೆಹಲಿಯಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ರಾಯಭಾರಿಗೆ ಸಮಾನವಾದ ಹುದ್ದೆಯನ್ನು ನೀಡುವ ಸಾಧ್ಯತೆಯ ಕುರಿತು ನಾಯಕತ್ವದ ಕೆಲವು ವಿಭಾಗಗಳಲ್ಲಿ ಪರಿಶೋಧನಾತ್ಮಕ ಮಟ್ಟದ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ಹೇಳುತ್ತವೆ. ಆದರೂ ಯಾವುದೇ ಔಪಚಾರಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯ ಘಟಕದಲ್ಲಿ ಆಂತರಿಕ ಒಗ್ಗಟ್ಟು ಪುನಃಸ್ಥಾಪಿಸಲು ಹಿರಿಯ ನಾಯಕರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತದೆ.

ಬೆಳವಣಿಗೆಗಳ ಬಗ್ಗೆ ತಿಳಿದಿರುವವರ ಪ್ರಕಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಈ ವಾರ ಅಥವಾ ಮುಂದಿನ ವಾರ ರಾಹುಲ್ ಗಾಂಧಿ ಅವರೊಂದಿಗೆ ರಾಜಕೀಯ ಮತ್ತು ಸಾಂಸ್ಥಿಕ ವಿಷಯಗಳ ಕುರಿತು ಚರ್ಚಿಸಲು ಶಶಿ ತರೂರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ನೇರ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಇವು ಆರಂಭಿಕ ಹಂತದಲ್ಲಿ ಸೂಕ್ಷ್ಮ ಸಮಾಲೋಚನೆಗಳಾಗಿವೆ. ಇದು ಸಾರ್ವಜನಿಕವಾಗಿ ನಿರಾಕರಿಸಲ್ಪಟ್ಟರೂ ಕೂಡ ತೀವ್ರ ಚರ್ಚೆಗಳ ಮಹತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಹಿರಿಯ ನಾಯಕರೊಬ್ಬರು ಹೇಳುತ್ತಾರೆ. ಕೇರಳದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಮಹತ್ವದ ಬೆಳವಣಿಗೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ಶಶಿ ತರೂರ್ ಡಿಸೆಂಬರ್ 27 ರಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಸುಲ್ತಾನ್ ಬತ್ತೇರಿಯಲ್ಲಿ ನಡೆದ ಎರಡು ದಿನಗಳ ಕೆಪಿಸಿಸಿ ನಾಯಕತ್ವ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲಿ ಅವರು ರಾಜ್ಯ ನಾಯಕರಿಗೆ ಹತ್ತಿರವಾಗಿದ್ದರು.

ನಾನು ಪಕ್ಷ ಹಾಕಿದ ಗೆರೆಯನ್ನು ದಾಟಿಲ್ಲ, ಶಿಸ್ತು ಉಲ್ಲಂಘಿಸಿಲ್ಲ

ನಿನ್ನೆ ವಯನಾಡ್ ಶಿಬಿರದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ನಾನು ಪಕ್ಷದ ಎಲ್ಲೆಯನ್ನು ಮೀರಿದ್ದೇನೆ ಎಂದು ಯಾರು ಹೇಳಿದರು? ಪಕ್ಷದ ಗೆರೆ ದಾಟಿಲ್ಲ, ಶಿಸ್ತು ಉಲ್ಲಂಘಿಸಿಲ್ಲ, ನಾನು ವಿವಿಧ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದಾಗಲೂ, ಹೆಚ್ಚಿನ ವಿಷಯಗಳಲ್ಲಿ ಪಕ್ಷ ಮತ್ತು ನಾನು ಒಂದೇ ಸಾಲಿನಲ್ಲಿ ನಿಂತಿದ್ದೇವೆ ಎಂದು ಹೇಳಿದರು.

ತಮ್ಮ ಹಿಂದಿನ ಹೇಳಿಕೆಗಳು ಮತ್ತು ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಪಕ್ಷದ ಗೆಲುವಿಗೆ ಮುಂದಿನ ಮೂರು ತಿಂಗಳುಗಳಲ್ಲಿ ರಾಜ್ಯ ನಾಯಕರೊಂದಿಗೆ ಕೆಲಸ ಮಾಡುವುದಾಗಿಯೂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಗಳ ಭರ್ಜರಿ ಜಯ

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

IDFC First Bank ವಂಚನೆ ಪ್ರಕರಣ: ತನಿಖೆಗೆ ಆದೇಶಿಸಿದ ಹರಿಯಾಣ CM ಸೈನಿ

SCROLL FOR NEXT