ಸಾಂದರ್ಭಿಕ ಚಿತ್ರ 
ದೇಶ

ರಾಯಪುರ: ಎಂಟು ಮುಸ್ಲಿಂ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ!

ರಾಯಪುರ ಜಿಲ್ಲೆಯ ಕಟೋವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೂರಜ್‌ಪುರದಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಪುರುಲಿಯದ ಚೆಪ್ರಿ ಗ್ರಾಮದವರಾದ ವಲಸೆ ಕಾರ್ಮಿಕರು ಸೂರಜ್‌ಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಕೋಲ್ಕತ್ತಾ: ಛತ್ತೀಸ್‌ಗಢದ ರಾಯಪುರದಲ್ಲಿ ಬಂಗಾಳಿ ಮಾತನಾಡುವ ಎಂಟು ಮುಸ್ಲಿಂ ವಲಸೆ ಕಾರ್ಮಿಕರ ಗುಂಪಿನ ಮೇಲೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಕಾರ್ಮಿಕನೊಬ್ಬನಿಗೆ ಗಂಭೀರ ಗಾಯಗಳಾಗಿವೆ.

ರಾಯಪುರ ಜಿಲ್ಲೆಯ ಕಟೋವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೂರಜ್‌ಪುರದಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಪುರುಲಿಯದ ಚೆಪ್ರಿ ಗ್ರಾಮದವರಾದ ವಲಸೆ ಕಾರ್ಮಿಕರು ಸೂರಜ್‌ಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಭಾನುವಾರ ವಲಸೆ ಕಾರ್ಮಿಕರು ಬೇಕರಿ ಮಾಲೀಕರೊಂದಿಗೆ ತಮ್ಮ ವೇತನದ ಬಗ್ಗೆ ವಾಗ್ವಾದ ನಡೆಸುತ್ತಿದ್ದಾಗ ಅಲ್ಲಿಗೆ ಬಂದ ಬಜರಂಗದಳದ ಕಾರ್ಯಕರ್ತರು ಲಾಠಿಯಿಂದ ಹೊಡೆಯಲು ಶುರು ಮಾಡಿದ್ದಾರೆ. ಇದರ ಪರಿಣಾಮವಾಗಿ, ವಲಸೆ ಕಾರ್ಮಿಕರಲ್ಲಿ ಒಬ್ಬನ ಬಲಗೈಗೆ ಮೂಳೆ ಮುರಿತವಾಗಿದೆ. ತದ ನಂತರ ಪೊಲೀಸರು ಸಂತ್ರಸ್ತರನ್ನು ಉದ್ರಿಕ್ತರಿಂದ ರಕ್ಷಿಸಿದ್ದಾರೆ.

"ಸೂರಜ್‌ಪುರದ ಕಟೋವಾಲಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಎಂಟು ಕಾರ್ಮಿಕರ ಬಗ್ಗೆ ವಿವರಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಿದ್ದೇನೆ. ಎಲ್ಲಾ ಎಂಟು ಕಾರ್ಮಿಕರ ದಾಖಲೆಗಳನ್ನು ಸಂಗ್ರಹಿಸಿ ಪೊಲೀಸರಿಗೆ ಸಲ್ಲಿಸಿದ್ದೇವೆ" ಎಂದು ಚೆಪ್ರಿಯ TCM ನಾಯಕ ಶೇಖ್ ಇಕ್ಬಾಲ್ ಹೇಳಿದ್ದಾರೆ.

ಈ ಮಧ್ಯೆ ಒಡಿಶಾದ ಸಂಬಲ್‌ಪುರದಲ್ಲಿ ಬಂಗಾಳಿ ಮಾತನಾಡುವ ಮತ್ತೊಬ್ಬ ಮುಸ್ಲಿಂ ವಲಸೆ ಕಾರ್ಮಿಕನ ಮೇಲೆ ಭಾನುವಾರ ದಾಳಿ ನಡೆಸಲಾಗಿದ್ದು, ಆತನ ಕೈ ಮೂಳೆ ಮುರಿತವಾಗಿದೆ.

ಈ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಯ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದನ್ನು "ಕ್ರೂರ ದಬ್ಬಾಳಿಕೆ" ಎಂದು ಹೇಳಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಬಂಗಾಳಿ ವಲಸಿಗರು ಪಶ್ಚಿಮ ಬಂಗಾಳಕ್ಕೆ ಹಿಂತಿರುಗಿ ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸುವಂತೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

'ಧೈರ್ಯ ಇದ್ದರೆ ಈಗ ಮುಟ್ಟಿ..': ಅಮೆರಿಕಕ್ಕೆ ರಷ್ಯಾ ಸವಾಲು; ಅಣ್ವಸ್ತ್ರ ನೌಕೆಗಳ ನಿಯೋಜನೆ, US ಹಡುಗುಗಳ ಮುಳುಗಿಸಲು ಕರೆ!

SCROLL FOR NEXT