63 ನಕ್ಸಲರು ಪೊಲೀಸರಿಗೆ ಶರಣು 
ದೇಶ

ಛತ್ತೀಸ್‌ಗಢದಲ್ಲಿ ಮಹಾ ಶರಣಾಗತಿ: 18 ಮಹಿಳೆಯರು ಸೇರಿ 63 ನಕ್ಸಲರು ಪೊಲೀಸರಿಗೆ ಶರಣು!

ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.

ದಾಂತೆವಾಡ: ಛತ್ತೀಸ್‌ಗಢದ ದಾಂತೆವಾಡ ಜಿಲ್ಲೆಯಲ್ಲಿ ಶುಕ್ರವಾರ ಸುಮಾರು 63 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ 36 ಮಂದಿ ತಲೆಗೆ 1.19 ಕೋಟಿಗೂ ಹೆಚ್ಚು ಮೊತ್ತದ ಬಹುಮಾನ ಹೊಂದಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಪೂನಾ ಮಾರ್ಗೆಮ್'(ಪುನರ್ವಸತಿಯಿಂದ ಸಾಮಾಜಿಕ ಪುನರ್ವಸತಿವರೆಗೆ) ಉಪಕ್ರಮದಡಿಯಲ್ಲಿ 18 ಮಹಿಳೆಯರು ಸೇರಿದಂತೆ 63 ನಕ್ಸಲರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ದಾಂತೆವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಹೇಳಿದ್ದಾರೆ.

ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.

ಶರಣಾದ ನಕ್ಸಲರು, ದಕ್ಷಿಣ ಬಸ್ತಾರ್ ವಿಭಾಗ, ಪಶ್ಚಿಮ ಬಸ್ತಾರ್ ವಿಭಾಗ, ರಾಜ್ಯದ ಮಾಡ್ ವಿಭಾಗ ಮತ್ತು ಒಡಿಶಾದ ಗಡಿ ಪ್ರದೇಶಗಳಲ್ಲಿ ಸಕ್ರಿಯರಾಗಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.

ಏಳು ಮಂದಿಗೆ ತಲೆಗೆ ತಲಾ 8 ಲಕ್ಷ ರೂ. ಬಹುಮಾನವಿತ್ತು ಎಂದು ಅವರು ಹೇಳಿದ್ದಾರೆ.

ಶರಣಾದ ಎಲ್ಲಾ 63 ನಕ್ಸಲರಿಗೆ ತಲಾ 50,000 ರೂ.ಗಳ ತಕ್ಷಣದ ಸಹಾಯವನ್ನು ನೀಡಲಾಗುವುದು ಮತ್ತು ಸರ್ಕಾರದ ನೀತಿಯ ಪ್ರಕಾರ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜನವರಿ 7 ರಂದು ನೆರೆಯ ಸುಕ್ಮಾ ಜಿಲ್ಲೆಯಲ್ಲಿ 26 ನಕ್ಸಲರು ಶರಣಾಗಿದ್ದರು. 2025 ರಲ್ಲಿ ರಾಜ್ಯದಲ್ಲಿ 1,500 ಕ್ಕೂ ಹೆಚ್ಚು ನಕ್ಸಲರು ಶರಣಾಗಿದ್ದಾರೆ. ಮಾರ್ಚ್ 31, 2026 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಸಂಕಲ್ಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT