ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ  
ದೇಶ

ಉಮರ್ ಖಾಲಿದ್ ಗೆ ಪತ್ರ: 'ನಿಮ್ಮದು ನೀವು ನೋಡಿಕೊಳ್ಳಿ'; ಮಮ್ದಾನಿಗೆ ಭಾರತದ ತಿರುಗೇಟು!

ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ಭಾರತ ತಿರುಗೇಟು ನೀಡಿದೆ.

ನವದೆಹಲಿ: ದೇಶದ್ರೋಹ ಆರೋಪದಲ್ಲಿ ಜೈಲಿನಲ್ಲಿರುವ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಪತ್ರ ಬರೆದಿರುವುದನ್ನು ಭಾರತ ಶುಕ್ರವಾರ ಅಸಮ್ಮತಿ ವ್ಯಕ್ತಪಡಿಸಿದೆ.

ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ತಿರುಗೇಟು ನೀಡಿದೆ. ಕಳೆದ ತಿಂಗಳು ಅಮೆರಿಕದಲ್ಲಿ ಉಮರ್ ಖಾಲಿದ್ ಅವರ ಪೋಷಕರು ಭೇಟಿಯಾದಾಗ ಅನಿವಾಸಿ ಭಾರತೀಯ ಮಮ್ದಾನಿ, ಖಾಲಿದ್ ಗೆ ತಮ್ಮ ಕೈಯಿಂದಲೇ ಬರೆದ ಪತ್ರವೊಂದನ್ನು ಬರೆದಿದ್ದರು.

ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, "ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು.

ವೈಯಕ್ತಿಕ ಪೂರ್ವಾಗ್ರಹಗಳನ್ನು ವ್ಯಕ್ತಪಡಿಸುವುದು ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಯೋಗ್ಯವಲ್ಲ. ಅಂತಹ ಹೇಳಿಕೆಗಳ ಬದಲಿಗೆ, ಅವರಿಗೆ ವಹಿಸಲಾದ ಜವಾಬ್ದಾರಿಗಳತ್ತ ಗಮನ ಹರಿಸುವುದು ಉತ್ತಮ ಎಂದು ಜೈಸ್ವಾಲ್ ತಿರುಗೇಟು ನೀಡಿದರು.

ಸೆಪ್ಟೆಂಬರ್ 2020 ರ ದೆಹಲಿ ಗಲಭೆ ಪಿತೂರಿ ಆರೋಪದಲ್ಲಿ ಜೈಲಿನಲ್ಲಿರುವ ಖಾಲಿದ್‌ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT