ಅಜ್ಮೀರ್ ದರ್ಗಾ 
ದೇಶ

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಆ ಸ್ಥಳದಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅಜ್ಮೀರ್: ರಾಜಸ್ಥಾನದ ಪ್ರಸಿದ್ಧ ಅಜ್ಮೀರ್ ದರ್ಗಾ ಮೂಲತಃ "ಶಿವನ ದೇವಸ್ಥಾನವಾಗಿತ್ತು ಎಂದು ಪ್ರತಿಪಾದಿಸುವ ಅರ್ಜಿಯೊಂದನ್ನು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ಸಂಬಂಧ ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅಜ್ಮೀರ್ ದರ್ಗಾ ಶಿವನ ದೇವಸ್ಥಾನವಾಗಿತ್ತು. ನಂತರ ಅದನ್ನು ದರ್ಗಾ ಮಾಡಲಾಯಿತು. ಈ ವಿವಾದದ ಬಗ್ಗೆ ಬಹಳ ಹಿಂದಿನಿಂದಲೂ ಹೋರಾಡುತ್ತಿದ್ದೇನೆ. ಈ ಹಿಂದೆ ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಅದನ್ನು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ರವಾನಿಸಲಾಗಿದೆ" ಎಂದು ಅವರು ಹೇಳಿದ್ದಾರೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸರ್ವೇ ನಡೆಸಬೇಕೆಂದು ಮನವಿಯಲ್ಲಿ ಒತ್ತಾಯಿಸಿರುವುದಾಗಿ ಅವರು ತಿಳಿಸಿದ್ದಾರೆ.

ಇಂದು ಅಜ್ಮೀರ್‌ನ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಹಿರಿಯ ವಕೀಲ ಎ ಪಿ ಸಿಂಗ್ ಹೇಳಿದ್ದಾರೆ. ಈ ದರ್ಗಾ ಶಿವನಿಗೆ ಸಮರ್ಪಿತವಾದ ದೇವಾಲಯವಾಗಿದ್ದು, ಪ್ರಾಚೀನ ಕಾಲದಿಂದಲೂ ಇದೆ" ಎಂದು ಅವರು ಪ್ರತಿಪಾದಿಸಿದ್ದಾರೆ.

2024 ರಲ್ಲಿ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಕೂಡ ಅರ್ಜಿಯನ್ನು ಸಲ್ಲಿಸಿದ್ದರು. ಅದೇ ರೀತಿ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾವನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದ್ದು, ದರ್ಗಾವನ್ನು ಹಿಂದೂ ದೇವಾಲಯ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇನ್ಮುಂದೆ Mr Nice Guy ಇರೊಲ್ಲ.. ಕಿಲ್ಲಿಂಗ್ ಮಷಿನ್ ಕೊನೆಗೊಳ್ಳುವ ಸಮಯ ಬಂದಿದೆ: ಇರಾನ್ ಗೆ ಮತ್ತೆ Donald Trump ಬೆದರಿಕೆ!

ಕಾಶ್ಮೀರದಲ್ಲಿ ಅಮೆರಿಕಾದ ಪ್ರಜೆ ಬಂಧನ: ಅಲ್ಲಿ ಆತ ಮಾಡ್ತಿದಿದ್ದೇನು?

ದೀದಿಗೆ ಶಾಕ್: ಬಾಂಗ್ಲಾದ ನೂತನ ರಾಯಭಾರಿಯಾಗಿ TMC ಮಾಜಿ ನಾಯಕ ದಿನೇಶ್ ತ್ರಿವೇದಿ ನೇಮಕ?

IPL 2026: ಸಿಕ್ಸರ್ ಗಳ ಸುರಿಮಳೆ, ಶ್ರೇಯಸ್ ಅಯ್ಯರ್ ಪಡೆಯ ಬ್ಯಾಟಿಂಗ್ ಅಬ್ಬರಕ್ಕೆ ಹಲವು ದಾಖಲೆಗಳು ಪತನ!

IPL 2026: ಮುಂದುವರೆದ PBKS ಜೈತ್ರ ಯಾತ್ರೆ, LSG ವಿರುದ್ಧ 54 ರನ್ ಗಳ ಭರ್ಜರಿ ಜಯ

SCROLL FOR NEXT