ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(CCU) ಈ ಇಬ್ಬರು ನಿಪಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸೋಮವಾರ ಎರಡು ನಿಪಾ ವೈರಸ್ ಪ್ರಕರಣಗಳು ವರದಿಯಾಗಿವೆ. ಇಬ್ಬರು ನರ್ಸ್‌ಗಳಿಗೆ ನಿಪಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(CCU) ಈ ಇಬ್ಬರು ನಿಪಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ 24 ಪರಗಣ ಜಿಲ್ಲಾ ಆರೋಗ್ಯ ಆಡಳಿತದ ಮೂಲಗಳ ಪ್ರಕಾರ, ಪೂರ್ವ ಬರ್ಧಮಾನ್ ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಯ 25 ಮತ್ತು 27 ವರ್ಷ ವಯಸ್ಸಿನ ಇಬ್ಬರು ರೋಗಿಗಳು ಜನವರಿ 6 ರಿಂದ CCU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರಂಭದಲ್ಲಿ, ಅವರು ತಲೆನೋವು, ಗಂಟಲು ನೋವು, ಪ್ರಜ್ಞಾಹೀನತೆ, ಸೆಳೆತ, ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಪೂರ್ವ ಬರ್ಧಮಾನ್ ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಗಳಲ್ಲಿರುವ ಸ್ಥಳೀಯ ರಾಜ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಜನವರಿ 6 ರಂದು, ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಬರಾಸತ್‌ನಲ್ಲಿರುವ ಖಾಸಗಿ ಆಸ್ಪತ್ರೆಯ CCU ಗೆ ಸ್ಥಳಾಂತರಿಸಲಾಯಿತು ಎಂದು ಉತ್ತರ 24 ಪರಗಣ ಜಿಲ್ಲಾ ಆರೋಗ್ಯ ಆಡಳಿತದ ಮೂಲಗಳು ತಿಳಿಸಿವೆ.

ಉತ್ತರ 24 ಪರಗಣ ಜಿಲ್ಲೆಯ ಕಲ್ಯಾಣಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(AIIMS) ಪ್ರಯೋಗಾಲಯದಲ್ಲಿ ಅವರ ಸೆರೆಬ್ರಲ್ ದ್ರವ ಮತ್ತು ಗಂಟಲಿನ ದ್ರವದ ಮಾದರಿಗಳಲ್ಲಿ ನಿಪಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

"ರಾಜ್ಯದಲ್ಲಿ ಎರಡು ನಿಪಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಮತ್ತು ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗವನ್ನು ತಡೆಗಟ್ಟಲು ತಕ್ಷಣವೇ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಈಗಾಗಲೇ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇವೆ" ಎಂದು ಸರ್ಕಾರಿ ವೈದ್ಯಕೀಯ ವೈದ್ಯರ ವೇದಿಕೆಯ ಕಾರ್ಯದರ್ಶಿ ಡಾ. ಉತ್ಪಲ್ ಬ್ಯಾನರ್ಜಿ ಅವರು ತಿಳಿಸಿದ್ದಾರೆ.

2001ರ ನಂತರ ಪಶ್ಚಿಮ ಬಂಗಾಳದಲ್ಲಿ ನಿಪಾ ವೈರಸ್ ಪೀಡಿತ ರೋಗಿಗಳು ವರದಿಯಾಗಿರುವುದು ಇದೇ ಮೊದಲು ಎಂದು ಡಾ. ಬ್ಯಾನರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT