ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ ಮುನ್ನ ಮಂಜಕೋಟೆ ಸೆಕ್ಟರ್‌ನಲ್ಲಿ ಸ್ವಲ್ಪ ಹೊತ್ತು ಡ್ರೋನ್ ಗಳು ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಗಡಿಯಲ್ಲಿ ಮತ್ತೆ ಪಾಕಿಸ್ತಾನದ ಕಿರಿಕ್ ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಿಂದ (LOC) ಮಂಗಳವಾರ ಸಂಜೆ ಭಾರತದ ಗಡಿಯೊಳಗೆ ನುಗ್ಗಿದ ಪಾಕಿಸ್ತಾನಿ ಡ್ರೋನ್‌ಗಳತ್ತ ಭಾರತೀಯ ಸೇನಾಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ ಮುನ್ನ ಮಂಜಕೋಟೆ ಸೆಕ್ಟರ್‌ನಲ್ಲಿ ಸ್ವಲ್ಪ ಹೊತ್ತು ಡ್ರೋನ್ ಗಳು ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎರಡನೇ ಬಾರಿಗೆ ಪಾಕಿಸ್ತಾನದ ಡ್ರೋನ್‌ಗಳ ಮೇಲೆ ಭಾರತೀಯ ಸೇನೆಯು ಗುಂಡಿನ ದಾಳಿ ನಡೆಸಿದೆ.

ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿಯಲ್ಲಿ ಡ್ರೋನ್‌ಗಳು ಕಾಣಿಸಿಕೊಂಡ ನಂತರ ಭಾರತೀಯ ಸೇನೆಯು ಮಾನವರಹಿತ ವೈಮಾನಿಕ ವ್ಯವಸ್ಥೆ (UAS)ಮಾಡಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

ರಾತ್ರಿ 7 ಗಂಟೆ ಸುಮಾರಿಗೆ ರಜೌರಿಯ ಚಿಂಗಸ್ ಪ್ರದೇಶದಲ್ಲಿ ಪಾಕ್ ಡ್ರೋನ್ ಗಳು ಭಾರತದ ಗಡಿ ಪ್ರವೇಶಿಸಿದಾಗ ಸೇನಾಪಡೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಡ್ರೋನ್‌ಗಳು ನಾಪತ್ತೆಯಾಗಿದ್ದು, ಪಾಕ್ ನತ್ತ ಹೋಗಿವೆ.

ಯಾವುದೇ ಶಸ್ತ್ರಾಸ್ತ್ರಗಳು ಅಥವಾ ಮಾದಕ ದ್ರವ್ಯಗಳನ್ನು ಡ್ರೋನ್‌ಗಳು ಇಳಿಸಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

SCROLL FOR NEXT